ಲಾಹೋರ್: ಪಾಕಿಸ್ತಾನದ ಕರಾಚಿ, ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್ ಸರ್ಕಾರ ನಿರ್ವಹಿಸಲಿದ್ದು, ಇದಕ್ಕಾಗಿ 12,500 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಲಾಹೋರ್ನಲ್ಲಿ ನಡೆಯುವ ಪಂದ್ಯಗಳಿಗೆ 7,600 ಪೊಲೀಸರು ಹಾಗೂ ಕಮಾಂಡೊ ಸಹಿತ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. 4,500 ಅಧಿಕಾರಿಗಳು ಹಾಗೂ ವಿಶೇಷ ಘಟಕದಿಂದ 411 ಸಿಬ್ಬಂದಿ ಭದ್ರತಾ ಹೊಣೆ ಹೊತ್ತಿದ್ದಾರೆ.
ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಭದ್ರತೆ ಕುರಿತು ಈಗಾಗಲೇ ಆಯುಕ್ತರು ಹಲವು ಬಾರಿ ಸಭೆ ನಡೆಸಿದ್ದು, ಇನ್ನೂ ಹೆಚ್ಚುವರಿಯಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆ. ಭಾರತ ಮಾತ್ರ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…