ಕ್ರೀಡೆ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ವೇಳಾಪಟ್ಟಿ ಪ್ರಕಟ: ಹೈಬ್ರಿಡ್‌ ಮಾದರಿಯಲ್ಲಿ ಟೂರ್ನಿ

ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಮುಂದಿನ ವರ್ಷ ಫೆಬ್ರವರಿ.10ರಿಂದ ಮಾರ್ಚ್‌ 10ರವರೆಗೆ ಪಂದ್ಯಗಳು ನಡೆಯಲಿವೆ. ಮಾರ್ಚ್‌.9ರಂದು ಚಾಂಪಿಯನ್ಸ್‌ ಟ್ರೋಫಿಯ ಫೈನಲ್ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಫೈನಲ್‌ ದಿನ ಏನಾದರು ಏರುಪೇರು ಆದರೆ ಮೀಸಲು ದಿನವನ್ನು ಕಾಯ್ದಿರಿಸಲಾಗಿದೆ.

ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಫೆ.20ರಂದು ಬಾಂಗ್ಲಾದೇಶದ ವಿರುದ್ಧವಾಗಿ ಆಡಲಿದೆ. ನಂತರ ಫೆಬ್ರವರಿ.23ರಂದು ಪಾಕಿಸ್ತಾನ ಮತ್ತು ಭಾರತ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್‌ 2ರಂದು ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಿದೆ. ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.

ಮಾರ್ಚ್‌.4ರಂದು ದುಬೈನಲ್ಲಿ ಮೊದಲ ಸೆಮಿಫೈನಲ್, ಮಾರ್ಚ್‌ 5ರಂದು 2ನೇ ಸೆಮಿಫೈನಲ್‌ ನಡೆಯಲಿದೆ. ಮಾರ್ಚ್‌.9ರಂದು ಫೈನಲ್‌ ಪಂದ್ಯ ನಡೆಯಲಿದೆ.

ಭಾರತ ಹಾಗೂ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತಕ್ಕೆ ಪಾಕಿಸ್ತಾನದಲ್ಲಿ ಆಡಲು ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಆದ್ದರಿಂದ ಐಸಿಸಿ ಚಾಂಪಿಯನ್ಸ್‌ ಟೂರ್ನಿಯು ಹೈಬ್ರಿಡ್‌ ಮಾದರಿಯಲ್ಲಿ ನಡೆಯಲಿದೆ.

ಗುಂಪುಗಳು:

ಗುಂಪು ಎ: ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್‌, ಬಾಂಗ್ಲಾದೇಶ

ಗುಂಪು ಬಿ: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್‌

ವೇಳಾಪಟ್ಟಿ:

ಫೆ.19: ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್‌, ಕರಾಚಿ

ಫೆ.20: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ

ಫೆ.21: ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ, ನ್ಯಾಷನಲ್‌ ಸ್ಟೇಡಿಯಂ, ಕರಾಚಿ

ಫೆ.22: ಅಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌, ಗಡಾಫಿ ಸ್ಟೇಡಿಯಂ, ಲಾಹೋರ್‌

ಫೆ.23: ಪಾಕಿಸ್ತಾನ ವಿರುದ್ಧ ಭಾರತ, ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ, ದುಬೈ

ಫೆ.24: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌, ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂ, ರಾವಲ್ಪಿಂಡಿ

ಫೆ.25: ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂ

ಫೆ.26: ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್‌, ಗಡಾಫಿ ಸ್ಟೇಡಿಯಂ, ಲಾಹೋರ್‌

ಫೆ.27: ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ, ರಾವಲ್ಪಿಂಟಿ ಕ್ರಿಕೆಟ್‌ ಸ್ಟೇಡಿಯಂ, ರಾವಲ್ಪಿಂಡಿ

ಫೆ.28: ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ, ಗಡಾಫಿ ಕ್ರೀಡಾಂಗಣ, ಲಾಹೋರ್‌

ಮಾರ್ಚ್‌.1: ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌, ನ್ಯಾಷನಲ್‌ ಸ್ಟೇಡಿಯಂ, ಕರಾಚಿ

ಮಾರ್ಚ್‌.2: ನ್ಯೂಜಿಲೆಂಡ್‌ ವಿರುದ್ಧ ಭಾರತ, ದುಬೈ ಅಂತರಾಷ್ಟ್ರೀ ಕ್ರಿಕೆಟ್‌ ಸ್ಟೇಡಿಯಂ, ದುಬೈ

ಮಾರ್ಚ್‌.4: ಮೊದಲ ಸೆಮಿಫೈನಲ್‌, ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ,‌ ದುಬೈ

ಮಾರ್ಚ್‌.5: ಎರಡನೇ ಸೆಮಿಫೈನಲ್‌, ಗಡಾಫಿ ಸ್ಟೇಡಿಯಂ, ಲಾಹೋರ್‌

ಮಾರ್ಚ್‌.9: ಫೈನಲ್‌, ಗಡಾಫಿ ಸ್ಟೇಡಿಯಂ, ಲಾಹೋರ್‌ (ಭಾರತ ಅರ್ಹತೆ ಪಡೆದರೆ)

ಮಾರ್ಚ್‌.10: ಮೀಸಲು ದಿನ

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

5 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

9 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

9 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

9 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

9 hours ago