ಕ್ರೀಡೆ

ICC mens t20 team of the year: ನಾಲ್ವರು ಭಾರತೀಯರಿಗೆ ಸ್ಥಾನ!

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.

ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು ಒಳಗೊಂಡಿರುವ ತಂಡದಲ್ಲಿ ಟೀಂ ಇಂಡಿಯಾದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಉಳಿದಂತೆ ಝಿಂಬಾಬ್ವೆ ತಂಡದ ಇಬ್ಬರು ಆಟಗಾರರು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ತಂಡಗಳಿಂದ ತಲಾ ಒಬ್ಬರು ಆಟಗಾರರು ವರ್ಷದ ಟೀಂ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತೀಯ ನಾಲ್ವರು ಆಟಗಾರರು:
ಸೂರ್ಯಕುಮಾರ್ ಯಾದವ್: 2023 ರಲ್ಲಿ ಒಟ್ಟು 18 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಒಟ್ಟು 733 ರನ್ ಕಲೆಹಾಕಿದ್ದರು. ಇದರಲ್ಲಿ 2 ಶತಕಗಳು ಸೇರಿತ್ತು. 2023ರ ಸಾಲಿನ ಅತ್ಯುತ್ತಮ ಆಟಗಾರನಾಗಿ ಕಾಣಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ದಕ್ಕಿಸಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್: ವರ್ಷದಲ್ಲಿ ಒಟ್ಟು 15 ಟಿ20 ಪಂದ್ಯಗಳಿಂದ ಜೈಸ್ವಾಲ್‌ 430 ರನ್​ ಕಲೆಹಾಕಿದ್ದಾರೆ.

ರವಿ ಬಿಷ್ಣೋಯ್: ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 44 ಓವರ್​ಗಳನ್ನು ಎಸೆದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ಒಟ್ಟು 18 ವಿಕೆಟ್ ಕಬಳಿಸುಲ್ಲಿ ಯಶಸ್ವಿಯಾಗಿದ್ದರು. ಈ ಪ್ರದರ್ಶನ ಅವರಿಗೆ ವರ್ಷದ ತಂಡದಲ್ಲಿ ಸ್ಥಾನ ಗಳಿಸಿಕೊಟ್ಟಿತು.

ಅರ್ಷದೀಪ್ ಸಿಂಗ್: 23 ಟಿ20 ಪಂದ್ಯಗಳನ್ನಾಡಿ 26 ವಿಕೆಟ್ ಕಬಳಿಸಿ ಅರ್ಶ್‌ದೀಪ್‌ ಮಿಂಚಿದ್ದರು.

ಐಸಿಸಿ ಟಿ20 ತಂಡ :
ಸೂರ್ಯಕುಮಾರ್ ಯಾದವ್ (ನಾಯಕ)
ಯಶಸ್ವಿ ಜೈಸ್ವಾಲ್ (ಭಾರತ)
ಫಿಲ್ ಸಾಲ್ಟ್ (ಇಂಗ್ಲೆಂಡ್)
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್)
ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್)
ಸಿಕಂದರ್ ರಾಝ (ಝಿಂಬಾಬ್ವೆ)
ಅಲ್ಪೇಶ್ ರಾಮ್​ಜಾನಿ (ಉಗಾಂಡ)
ಮಾರ್ಕ್ ಅಡೈರ್ (ಐರ್ಲೆಂಡ್)
ರವಿ ಬಿಷ್ಣೋಯ್ (ಭಾರತ)
ರಿಚರ್ಡ್ ನಾಗರವ (ಝಿಂಬಾಬ್ವೆ)
ಅರ್ಷದೀಪ್ ಸಿಂಗ್ (ಭಾರತ)

andolanait

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

27 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

52 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago