ಐಸಿಸಿ (ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.
ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು ಒಳಗೊಂಡಿರುವ ತಂಡದಲ್ಲಿ ಟೀಂ ಇಂಡಿಯಾದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಉಳಿದಂತೆ ಝಿಂಬಾಬ್ವೆ ತಂಡದ ಇಬ್ಬರು ಆಟಗಾರರು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ತಂಡಗಳಿಂದ ತಲಾ ಒಬ್ಬರು ಆಟಗಾರರು ವರ್ಷದ ಟೀಂ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತೀಯ ನಾಲ್ವರು ಆಟಗಾರರು:
ಸೂರ್ಯಕುಮಾರ್ ಯಾದವ್: 2023 ರಲ್ಲಿ ಒಟ್ಟು 18 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಒಟ್ಟು 733 ರನ್ ಕಲೆಹಾಕಿದ್ದರು. ಇದರಲ್ಲಿ 2 ಶತಕಗಳು ಸೇರಿತ್ತು. 2023ರ ಸಾಲಿನ ಅತ್ಯುತ್ತಮ ಆಟಗಾರನಾಗಿ ಕಾಣಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್ಗೆ ನಾಯಕನ ಪಟ್ಟ ದಕ್ಕಿಸಿಕೊಂಡಿದ್ದಾರೆ.
ಯಶಸ್ವಿ ಜೈಸ್ವಾಲ್: ವರ್ಷದಲ್ಲಿ ಒಟ್ಟು 15 ಟಿ20 ಪಂದ್ಯಗಳಿಂದ ಜೈಸ್ವಾಲ್ 430 ರನ್ ಕಲೆಹಾಕಿದ್ದಾರೆ.
ರವಿ ಬಿಷ್ಣೋಯ್: ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 44 ಓವರ್ಗಳನ್ನು ಎಸೆದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ಒಟ್ಟು 18 ವಿಕೆಟ್ ಕಬಳಿಸುಲ್ಲಿ ಯಶಸ್ವಿಯಾಗಿದ್ದರು. ಈ ಪ್ರದರ್ಶನ ಅವರಿಗೆ ವರ್ಷದ ತಂಡದಲ್ಲಿ ಸ್ಥಾನ ಗಳಿಸಿಕೊಟ್ಟಿತು.
ಅರ್ಷದೀಪ್ ಸಿಂಗ್: 23 ಟಿ20 ಪಂದ್ಯಗಳನ್ನಾಡಿ 26 ವಿಕೆಟ್ ಕಬಳಿಸಿ ಅರ್ಶ್ದೀಪ್ ಮಿಂಚಿದ್ದರು.
ಐಸಿಸಿ ಟಿ20 ತಂಡ :
ಸೂರ್ಯಕುಮಾರ್ ಯಾದವ್ (ನಾಯಕ)
ಯಶಸ್ವಿ ಜೈಸ್ವಾಲ್ (ಭಾರತ)
ಫಿಲ್ ಸಾಲ್ಟ್ (ಇಂಗ್ಲೆಂಡ್)
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್)
ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್)
ಸಿಕಂದರ್ ರಾಝ (ಝಿಂಬಾಬ್ವೆ)
ಅಲ್ಪೇಶ್ ರಾಮ್ಜಾನಿ (ಉಗಾಂಡ)
ಮಾರ್ಕ್ ಅಡೈರ್ (ಐರ್ಲೆಂಡ್)
ರವಿ ಬಿಷ್ಣೋಯ್ (ಭಾರತ)
ರಿಚರ್ಡ್ ನಾಗರವ (ಝಿಂಬಾಬ್ವೆ)
ಅರ್ಷದೀಪ್ ಸಿಂಗ್ (ಭಾರತ)
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…