ಕ್ರೀಡೆ

ICC mens t20 team of the year: ನಾಲ್ವರು ಭಾರತೀಯರಿಗೆ ಸ್ಥಾನ!

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.

ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು ಒಳಗೊಂಡಿರುವ ತಂಡದಲ್ಲಿ ಟೀಂ ಇಂಡಿಯಾದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಉಳಿದಂತೆ ಝಿಂಬಾಬ್ವೆ ತಂಡದ ಇಬ್ಬರು ಆಟಗಾರರು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ತಂಡಗಳಿಂದ ತಲಾ ಒಬ್ಬರು ಆಟಗಾರರು ವರ್ಷದ ಟೀಂ ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತೀಯ ನಾಲ್ವರು ಆಟಗಾರರು:
ಸೂರ್ಯಕುಮಾರ್ ಯಾದವ್: 2023 ರಲ್ಲಿ ಒಟ್ಟು 18 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಒಟ್ಟು 733 ರನ್ ಕಲೆಹಾಕಿದ್ದರು. ಇದರಲ್ಲಿ 2 ಶತಕಗಳು ಸೇರಿತ್ತು. 2023ರ ಸಾಲಿನ ಅತ್ಯುತ್ತಮ ಆಟಗಾರನಾಗಿ ಕಾಣಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ದಕ್ಕಿಸಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್: ವರ್ಷದಲ್ಲಿ ಒಟ್ಟು 15 ಟಿ20 ಪಂದ್ಯಗಳಿಂದ ಜೈಸ್ವಾಲ್‌ 430 ರನ್​ ಕಲೆಹಾಕಿದ್ದಾರೆ.

ರವಿ ಬಿಷ್ಣೋಯ್: ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 44 ಓವರ್​ಗಳನ್ನು ಎಸೆದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ಒಟ್ಟು 18 ವಿಕೆಟ್ ಕಬಳಿಸುಲ್ಲಿ ಯಶಸ್ವಿಯಾಗಿದ್ದರು. ಈ ಪ್ರದರ್ಶನ ಅವರಿಗೆ ವರ್ಷದ ತಂಡದಲ್ಲಿ ಸ್ಥಾನ ಗಳಿಸಿಕೊಟ್ಟಿತು.

ಅರ್ಷದೀಪ್ ಸಿಂಗ್: 23 ಟಿ20 ಪಂದ್ಯಗಳನ್ನಾಡಿ 26 ವಿಕೆಟ್ ಕಬಳಿಸಿ ಅರ್ಶ್‌ದೀಪ್‌ ಮಿಂಚಿದ್ದರು.

ಐಸಿಸಿ ಟಿ20 ತಂಡ :
ಸೂರ್ಯಕುಮಾರ್ ಯಾದವ್ (ನಾಯಕ)
ಯಶಸ್ವಿ ಜೈಸ್ವಾಲ್ (ಭಾರತ)
ಫಿಲ್ ಸಾಲ್ಟ್ (ಇಂಗ್ಲೆಂಡ್)
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್)
ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್)
ಸಿಕಂದರ್ ರಾಝ (ಝಿಂಬಾಬ್ವೆ)
ಅಲ್ಪೇಶ್ ರಾಮ್​ಜಾನಿ (ಉಗಾಂಡ)
ಮಾರ್ಕ್ ಅಡೈರ್ (ಐರ್ಲೆಂಡ್)
ರವಿ ಬಿಷ್ಣೋಯ್ (ಭಾರತ)
ರಿಚರ್ಡ್ ನಾಗರವ (ಝಿಂಬಾಬ್ವೆ)
ಅರ್ಷದೀಪ್ ಸಿಂಗ್ (ಭಾರತ)

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

6 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

18 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

20 hours ago