ಕ್ರೀಡೆ

ಐಸಿಸಿ ಏಕದಿನ ರ‍್ಯಾಂಕಿಂಗ್‌: ಅಗ್ರಸ್ಥಾನಕ್ಕೇರಿದ ಗಿಲ್‌

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟರ್‌ ಶುಭಮನ್‌ ಗಿಲ್‌ ಅಗ್ರಸ್ಥಾನಕ್ಕೇರಿದ್ದಾರೆ.

ಪಾಕಿಸ್ತಾನ ಆಟಗಾರ ಬಾಬರ್‌ ಅಜಂ ಅವರನ್ನು ಹಿಂದಿಕ್ಕಿ, ಗಿಲ್‌ ಎರಡನೇ ಸಲ ಅಗ್ರಮಾನ್ಯ ಬ್ಯಾಟರ್‌ ಎನಿಸಿದ್ದಾರೆ.

ಇತ್ತೀಚಿಗೆ ಇಂಗ್ಲೆಂಡ್‌ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗಿಲ್‌ ಒಟ್ಟಾರೆ 796 ರೇಟಿಂಗ್‌ ಅಂಕಗಳನ್ನು ಕಲೆ ಹಾಕಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬಾಬರ್‌ 773 ರೇಟಿಂಗ್‌ ಅಂಕಗಳನ್ನು ಹೊಂದಿದ್ದಾರೆ.

ಅಗ್ರ 10ರಲ್ಲಿ ಭಾರತದ ನಾಲ್ವರು

ಅಗ್ರ 10ರ ಪಟ್ಟಿಯಲ್ಲಿ ಭಾರತದ ನಾಲ್ವರು ಕಾಣಿಸಿಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ 3ನೇ ಸ್ಥಾನ (761 ಪಾಯಿಂಟ್‌), ವಿರಾಟ್‌ ಕೊಹ್ಲಿ 6ನೇಸ್ಥಾನ (727 ಪಾಯಿಂಟ್‌), ಮತ್ತು ಶ್ರೇಯಸ್‌ ಅಯ್ಯರ್‌ ಒಂಭತ್ತನೇ ಸ್ಥಾನದಲ್ಲಿದ್ದಾರೆ.

ಮಹೀಶ ತೀಕ್ಷಣ ನಂ.1 ಬೌಲರ್‌

ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ನರ್‌ ಮಹೀಶ ತೀಕ್ಷಣ ಅಗ್ರಸ್ಥಾನಕ್ಕೆರಿದ್ದಾರೆ. ತೀಕ್ಷಣ 680 ಹಾಗೂ ರಶೀದ್‌ 669 ರೇಟಿಂಗ್‌ ಅಂಕಗಳನ್ನು ಪಡೆದಿದ್ದಾರೆ.

ಅಗ್ರ 10ರ ಪಟ್ಟಿಯಲ್ಲಿ ಭಾರತದ ಕುಲದೀಪ್‌ ಯಾದವ್‌ 4ನೇ ಸ್ಥಾನದಲ್ಲಿದ್ದರೆ, ಬಲಗೈ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ 10 ಸ್ಥಾನದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

14 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

28 mins ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

1 hour ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

1 hour ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago