ಕ್ರೀಡೆ

ಐಸಿಸಿ ಏಕದಿನ ರ‍್ಯಾಂಕಿಂಗ್‌: ಅಗ್ರಸ್ಥಾನಕ್ಕೇರಿದ ಗಿಲ್‌

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟರ್‌ ಶುಭಮನ್‌ ಗಿಲ್‌ ಅಗ್ರಸ್ಥಾನಕ್ಕೇರಿದ್ದಾರೆ.

ಪಾಕಿಸ್ತಾನ ಆಟಗಾರ ಬಾಬರ್‌ ಅಜಂ ಅವರನ್ನು ಹಿಂದಿಕ್ಕಿ, ಗಿಲ್‌ ಎರಡನೇ ಸಲ ಅಗ್ರಮಾನ್ಯ ಬ್ಯಾಟರ್‌ ಎನಿಸಿದ್ದಾರೆ.

ಇತ್ತೀಚಿಗೆ ಇಂಗ್ಲೆಂಡ್‌ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗಿಲ್‌ ಒಟ್ಟಾರೆ 796 ರೇಟಿಂಗ್‌ ಅಂಕಗಳನ್ನು ಕಲೆ ಹಾಕಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬಾಬರ್‌ 773 ರೇಟಿಂಗ್‌ ಅಂಕಗಳನ್ನು ಹೊಂದಿದ್ದಾರೆ.

ಅಗ್ರ 10ರಲ್ಲಿ ಭಾರತದ ನಾಲ್ವರು

ಅಗ್ರ 10ರ ಪಟ್ಟಿಯಲ್ಲಿ ಭಾರತದ ನಾಲ್ವರು ಕಾಣಿಸಿಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ 3ನೇ ಸ್ಥಾನ (761 ಪಾಯಿಂಟ್‌), ವಿರಾಟ್‌ ಕೊಹ್ಲಿ 6ನೇಸ್ಥಾನ (727 ಪಾಯಿಂಟ್‌), ಮತ್ತು ಶ್ರೇಯಸ್‌ ಅಯ್ಯರ್‌ ಒಂಭತ್ತನೇ ಸ್ಥಾನದಲ್ಲಿದ್ದಾರೆ.

ಮಹೀಶ ತೀಕ್ಷಣ ನಂ.1 ಬೌಲರ್‌

ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ನರ್‌ ಮಹೀಶ ತೀಕ್ಷಣ ಅಗ್ರಸ್ಥಾನಕ್ಕೆರಿದ್ದಾರೆ. ತೀಕ್ಷಣ 680 ಹಾಗೂ ರಶೀದ್‌ 669 ರೇಟಿಂಗ್‌ ಅಂಕಗಳನ್ನು ಪಡೆದಿದ್ದಾರೆ.

ಅಗ್ರ 10ರ ಪಟ್ಟಿಯಲ್ಲಿ ಭಾರತದ ಕುಲದೀಪ್‌ ಯಾದವ್‌ 4ನೇ ಸ್ಥಾನದಲ್ಲಿದ್ದರೆ, ಬಲಗೈ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ 10 ಸ್ಥಾನದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

13 mins ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

45 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

2 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

13 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

16 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

16 hours ago