ಕ್ರೀಡೆ

ICC ODI team of the year-2023: ರೋಹಿತ್‌, ಕೊಹ್ಲಿ ಸೇರಿದಂತೆ ಆರು ಭಾರತೀಯರಿಗೆ ಸ್ಥಾನ!

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌)ಯು ಇಂದು(ಮಂಗಳವಾರ) ವರ್ಷದ ಏಕದಿನ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಬರೋಬ್ಬರಿ ಆರು ಜನ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.

ವರ್ಷದ ತಂಡಕ್ಕೆ ನಾಯಕನಾಗಿ ರೋಹಿತ್‌ ಶರ್ಮಾ ನೇಮಕಗೊಂಡಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ರೋಹಿತ್‌ ನಾಯಕತ್ವದಲ್ಲಿ ಅಗಮ್ಯ ಸಾಧನೆ ತೋರಿತ್ತು. ಈ ಸಲುವಾಗಿ ವರ್ಷದ ಏಕದಿನ ತಂಡಕ್ಕೆ ರೋಹಿತ್‌ ನಾಯಕರಾಗಿದ್ದಾರೆ.

ಉಳಿದಂತೆ ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಮೊಹಮ್ಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಶಮಿ ತಂಡದಲ್ಲಿದ್ದಾರೆ. ನ್ಯೂಜಿಲೆಂಡ್ಸ್‌ನ ಆಲ್‌ರೌಂಡರ್‌ ಡೇರಿಯಲ್‌ ಮಿಚೆಲ್‌, ದಕ್ಷಿಣ ಆಫ್ರಿಕಾದ ವಿಕೇಟ್‌ ಕೀಪರ್‌ ಹೆನ್ರಿಚ್‌ ಕ್ಲಾಸೆನ್‌ ಮತ್ತು ಬೌಲರ್‌ ಮಾರ್ಕೋ ಎನ್ಸನ್‌, ಆಸೀಸ್‌ ತಂಡದ ಎಡಗೈ ದಾಂಡಿದ ಟ್ರಾವಿಸ್‌ ಹೆಡ್‌ ಮತ್ತು ಆಡಂ ಝಂಪಾ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾ (ನಾಯಕ): 2023 ರಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ರೊಹಿತ್ ಶರ್ಮಾ 52 ರ ಸರಾಸರಿಯಲ್ಲಿ ಒಟ್ಟು 1255 ರನ್ ಗಳಿಸುವ ಮೂಲಕ ತನ್ನ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದರು.

ಶುಭ್​ಮನ್ ಗಿಲ್: ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಶುಭ್​ಮನ್ ಗಿಲ್. ಒಟ್ಟು 1584 ರನ್​ ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ: 2023ರಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 1377 ರನ್ ಬಾರಿಸಿ ಹಲವು ದಾಖಲೆ ನಿರ್ಮಿಸಿದ್ದರು. ಸಚಿನ್‌ ಅವರ ಓಡಿಐ ಶತಕಗಳ ದಾಖಲೆಯನ್ನು ಸರಿಗಟ್ಟಿದ ಕೀರ್ತಿ ಕೊಹ್ಲಿಗೆ ದಕ್ಕಿದೆ

ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ಪರ ವೇಗಿ ಮೊಹಮ್ಮದ್ ಸಿರಾಜ್ ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 44 ವಿಕೆಟ್ ಕಬಳಿಸಿದ್ದರು.

ಕುಲ್ದೀಪ್ ಯಾದವ್: ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ 2023 ರಲ್ಲಿ ಒಟ್ಟು 49 ವಿಕೆಟ್ ಕಬಳಿಸಿ ಸ್ಪಿನ್ ಮೋಡಿ ಮಾಡಿದ್ದರು.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಸೆನ್ಸೇಷನ್ ವೇಗಿ ಮೊಹಮ್ಮದ್ ಶಮಿ ಕಳೆದ ವರ್ಷ ಒಟ್ಟು 43 ವಿಕೆಟ್ ಕಬಳಿಸಿದ್ದರು. 2023ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ 24 ವಿಕೆಟ್ ಪಡೆದು ದಾಖಲೆ ನಿರ್ಮಿಸಿದರು.

ಐಸಿಸಿ 2023ರ ಏಕದಿನ ತಂಡ ಹೀಗಿದೆ:
1- ರೋಹಿತ್ ಶರ್ಮಾ (ನಾಯಕ/ಭಾರತ)
2- ಶುಭ್​ಮನ್ ಗಿಲ್ (ಭಾರತ)
3- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)
4- ವಿರಾಟ್ ಕೊಹ್ಲಿ (ಭಾರತ)
5- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)
6- ಹೆನ್ರಿಕ್ ಕ್ಲಾಸೆನ್ (ಸೌತ್ ಆಫ್ರಿಕಾ)
7- ಮಾರ್ಕೊ ಯಾನ್ಸೆನ್ (ಸೌತ್ ಆಫ್ರಿಕಾ)
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ)
9- ಮೊಹಮ್ಮದ್ ಸಿರಾಜ್ (ಭಾರತ)
10- ಕುಲ್ದೀಪ್ ಯಾದವ್ (ಭಾರತ)
11- ಮೊಹಮ್ಮದ್ ಶಮಿ (ಭಾರತ)

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

1 hour ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

2 hours ago