ಕ್ರೀಡೆ

ಐಸಿಸಿ ವರ್ಷದ ಏಕದಿನ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ಭಾರತದ ಆಟಗಾರರು

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ವರ್ಷದ ಏಕದಿನ ಕ್ರಿಕೆಟ್‌ ತಂಡ 2024 ಅನ್ನು ಪ್ರಕಟಿಸಿದ್ದು, ಅಚ್ಚರಿಯೆಂಬಂತೆ ಈ ತಂಡದಲ್ಲಿ ಭಾರತ ತಂಡದ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಇನ್ನು ವರ್ಷದ ಪುರುಷರ ಏಕದಿನ ಕ್ರಿಕೆಟ್‌ ತಂಡದಲ್ಲಿ ನಾಲ್ವರು ಶ್ರೀಲಂಕಾ ಆಟಗಾರರು ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಈ ತಂಡದಲ್ಲಿ ಅಚ್ಚರಿಯೆಂಬಂತೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾದ ಯಾವೊಬ್ಬ ಆಟಗಾರರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಶ್ರೀಲಂಕಾದ ಚರೀತಾ ಅಸಲಂಕಾ ಈ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಇತ್ತ ಮಹಿಳೆಯರ ವರ್ಷದ ಏಕದಿನ ಕ್ರಿಕೆಟ್‌ ತಂಡ ಕೂಡ ಪ್ರಕಟಿಸಿದ್ದು, ಭಾರತ ತಂಡದ ಸ್ಮೃತಿ ಮಂದಾನ ಹಾಗೂ ದೀಪ್ತಿ ಶರ್ಮಾ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಐಸಿಸಿ ವರ್ಷದ ಏಕದಿನ ತಂಡ ಇಂತಿದೆ:

ಚಾರಿತ್‌ ಅಸಲಂಕಾ (ನಾಯಕ), ಸೈಯಮ್‌ ಆಯೂಬ್‌, ರಹಮನುಲ್ಲಾ ಗುರ್ಬಾಜ್‌, ಪಥುಮ್‌ ನಿಸ್ಸಾಂಕ, ಕುಶಾಲ್‌ ಮೆಂಡೀಸ್‌, ಶೆರ್ಫೇನ್‌ ರುದರ್ಫೋರ್ಡ್‌, ಅಜ್ಮತುಲ್ಲಾ ಒಮರ್ಜಾಯ್‌, ವನ್ನಿಂದು ಹಸರಂಗಾ, ಶಾಹಿನ್‌ ಶಾ ಆಫ್ರೀದಿ, ಹ್ಯಾರಿಸ್‌ ರೌಫ್‌, ಅಲ್ಲಾ ಮೊಹಮ್ಮದ್‌ ಘಜನ್ಫರ್‌.

 

ಆಂದೋಲನ ಡೆಸ್ಕ್

Recent Posts

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

28 mins ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

4 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

4 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

4 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

4 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

4 hours ago