ಕ್ರೀಡೆ

ಐಸಿಸಿ ವರ್ಷದ ಏಕದಿನ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ಭಾರತದ ಆಟಗಾರರು

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ವರ್ಷದ ಏಕದಿನ ಕ್ರಿಕೆಟ್‌ ತಂಡ 2024 ಅನ್ನು ಪ್ರಕಟಿಸಿದ್ದು, ಅಚ್ಚರಿಯೆಂಬಂತೆ ಈ ತಂಡದಲ್ಲಿ ಭಾರತ ತಂಡದ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಇನ್ನು ವರ್ಷದ ಪುರುಷರ ಏಕದಿನ ಕ್ರಿಕೆಟ್‌ ತಂಡದಲ್ಲಿ ನಾಲ್ವರು ಶ್ರೀಲಂಕಾ ಆಟಗಾರರು ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಈ ತಂಡದಲ್ಲಿ ಅಚ್ಚರಿಯೆಂಬಂತೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾದ ಯಾವೊಬ್ಬ ಆಟಗಾರರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಶ್ರೀಲಂಕಾದ ಚರೀತಾ ಅಸಲಂಕಾ ಈ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಇತ್ತ ಮಹಿಳೆಯರ ವರ್ಷದ ಏಕದಿನ ಕ್ರಿಕೆಟ್‌ ತಂಡ ಕೂಡ ಪ್ರಕಟಿಸಿದ್ದು, ಭಾರತ ತಂಡದ ಸ್ಮೃತಿ ಮಂದಾನ ಹಾಗೂ ದೀಪ್ತಿ ಶರ್ಮಾ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಐಸಿಸಿ ವರ್ಷದ ಏಕದಿನ ತಂಡ ಇಂತಿದೆ:

ಚಾರಿತ್‌ ಅಸಲಂಕಾ (ನಾಯಕ), ಸೈಯಮ್‌ ಆಯೂಬ್‌, ರಹಮನುಲ್ಲಾ ಗುರ್ಬಾಜ್‌, ಪಥುಮ್‌ ನಿಸ್ಸಾಂಕ, ಕುಶಾಲ್‌ ಮೆಂಡೀಸ್‌, ಶೆರ್ಫೇನ್‌ ರುದರ್ಫೋರ್ಡ್‌, ಅಜ್ಮತುಲ್ಲಾ ಒಮರ್ಜಾಯ್‌, ವನ್ನಿಂದು ಹಸರಂಗಾ, ಶಾಹಿನ್‌ ಶಾ ಆಫ್ರೀದಿ, ಹ್ಯಾರಿಸ್‌ ರೌಫ್‌, ಅಲ್ಲಾ ಮೊಹಮ್ಮದ್‌ ಘಜನ್ಫರ್‌.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago