ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ : ತಮ್ಮದೇ ಆಯ್ಕೆಯ ಭಾರತ ತಂಡ ಪ್ರಕಟಿಸಿದ ಸೌರವ್ ಗಂಗುಲಿ

ಕೋಲ್ಕತಾ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ ಅವರು ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತಮ್ಮದೇ ಆಯ್ಕೆಯ 15 ಸದಸ್ಯರನ್ನು ಒಳಗೊಂಡ ಟೀಮ್ ಇಂಡಿಯಾವನ್ನು ಹೆಸರಿಸಿದ್ದಾರೆ. ಇದರಲ್ಲಿ ಕೆಲವು ಆಟಗಾರರನ್ನು ಅವರು ಹೊರಗಿಟ್ಟಿದ್ದಾರೆ.

ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಹಾಗೂ ತಿಲಕ್ ವರ್ಮಾ ಮೂವರನ್ನೂ ಸೇರಿಸಿಕೊಳ್ಳದಿರಲು ಗಂಗುಲಿ ನಿರ್ಧರಿಸಿದ್ದಾರೆ . ಈ ಮೂವರು ಏಶ್ಯಕಪ್ 2023 ಗೆ ಆಯ್ಕೆಯಾಗಿದ್ದಾರೆ..

ತಂಡದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್. ರಾಹುಲ್ ಇದ್ದಾರೆ. ಈ ಇಬ್ಬರು ಗಾಯದಿಂದ ಮರಳುತ್ತಿದ್ದಾರೆ ಹಾಗೂ ಏಶ್ಯಕಪ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾರತವು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅವರನ್ನು ಸೂಕ್ತ ಬ್ಯಾಟಿಂಗ್ ಆಯ್ಕೆಗಳಾಗಿ ಆಯ್ಕೆ ಮಾಡಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್ ಮಾತ್ರ ವಿಶೇಷ ವಿಕೆಟ್ ಕೀಪರ್ ಆಗಿದ್ದು, ಭಾರತವು ತಮ್ಮ ತಂಡದಲ್ಲಿ ಹೆಚ್ಚುವರಿ ಬ್ಯಾಟರ್ ಆಡಲು ಬಯಸಿದರೆ ರಾಹುಲ್ ಪರ್ಯಾಯ ಆಯ್ಕೆಯಾಗಿದ್ದಾರೆ.

ಆಲ್ ರೌಂಡರ್ ಗಳಲ್ಲಿ ಗಂಗುಲಿ ಅವರು ಹಾರ್ದಿಕ್ ಪಾಂಡ್ಯ ಮತ್ತು ಎಡಗೈ ಸ್ಪಿನ್ ಜೋಡಿಯಾದ ರವೀಂದ್ರ ಜಡೇಜ ಮತ್ತು ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಿದರು. ಗಂಗುಲಿ ಆಯ್ಕೆ ಮಾಡಿದ ತಂಡದಲ್ಲಿ ಕುಲದೀಪ್ ಯಾದವ್ ಇದ್ದಾರೆ.

ವೇಗದ ಬೌಲಿಂಗ್ ವಿಭಾಗದಲ್ಲಿ, ಗಂಗುಲಿ ಅವರು ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ರನ್ನು ಆಯ್ಕೆ ಮಾಡಿದ್ದಾರೆ.

ಈ ಆಟಗಾರರಲ್ಲಿ ಯಾರಾದರೂ ಯಾವುದೇ ಕಾರಣಕ್ಕಾಗಿ ಹೊರಗುಳಿದರೆ ಅಗತ್ಯವಿರುವ ಮೂರು ಬ್ಯಾಕ್-ಅಪ್ ಆಯ್ಕೆಗಳನ್ನು ಹೆಸರಿಸಿದ್ದಾರೆ.

“ಬ್ಯಾಟರ್ಗಳಲ್ಲಿ ಒಬ್ಬರು ಗಾಯಗೊಂಡರೆ ನಂತರ ತಿಲಕ್ ವರ್ಮಾ ಪ್ರವೇಶಿಸಬಹುದು, ಆದರೆ ವೇಗಿ ಗಾಯಗೊಂಡರೆ ಪ್ರಸಿದ್ಧ್ ಕೃಷ್ಠ ಅವಕಾಶ ಪಡೆಯುತ್ತಾರೆ., ಆದರೆ ಸ್ಪಿನ್ನರ್ ವಿಷಯದಲ್ಲಿ ಯಜುವೇಂದ್ರ ಚಹಾಲ್ ಬದಲಿ ಆಯ್ಕೆಯಾಗುತ್ತಾರೆ” ಎಂದು ಗಂಗುಲಿ ಸ್ಟಾರ್ ಸ್ಪೋರ್ಟ್ಸ್ ಗೆ ತಿಳಿಸಿದರು.

ಐಸಿಸಿ ವಿಶ್ವಕಪ್ 2023ಕ್ಕೆ ಸೌರವ್ ಗಂಗುಲಿ ಆಯ್ಕೆ ಮಾಡಿದ ಭಾರತ ತಂಡ:

ರೋಹಿತ್ ಶರ್ಮಾ, ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ .ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago