ಕ್ರೀಡೆ

ICC T20 ವಿಶ್ವಕಪ್​: ನೆದರ್ಲೆಂಡ್​ ವಿರುದ್ಧ ಸೋಲಿನ ಭೀತಿಯಲ್ಲಿ ಗೆದ್ದ ಬಾಂಗ್ಲಾದೇಶ

ಹೋಬಾರ್ಟ್: ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ನೆದರ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಸೋಮವಾರ (ಅಕ್ಟೋಬರ್ 24) ಹೋಬಾರ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನೆದರ್ಲೆಂಡ್ಸ್ ತಂಡ ಬಾಂಗ್ಲಾದೇಶದ ಆಟಗಾರರನ್ನು 144 ರನ್​ಗಳಿಗೆ ಕಟ್ಟಿ ಹಾಕಿತ್ತು. 144 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲೆಂಡ್​ ತಂಡ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿತು.
ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಬಾಂಗ್ಲಾದೇಶ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 144 ರನ್ ಗಳಿಸಿತು. ಈ ಪಂದ್ಯದಲ್ಲಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಶಾಕಿಬ್ ಅಲ್ ಹಸನ್ ಹಾಗೂ ಲಿಟನ್ ದಾಸ್​ ವಿಫಲರಾದರು.
ತಂಡದ ಪರ ನಜ್ಮುಲ್ ಹೊಸೈನ್ ಶಾಂಟೊ 25 ರನ್​, ಸೌಮ್ಯ ಸರ್ಕಾರ್ 14 ರನ್​, ಲಿಟನ್ ದಾಸ್ 9 ರನ್​, ನಾಯಕ ಶಕೀಬ್ ಅಲ್ ಹಸನ್ 7 ರನ್​, ಅಫೀಫ್ ಹೊಸೈನ್ 38 ರನ್​, ಯಾಸಿರ್ ಅಲಿ 3, ವಿಕೆಟ್​ ಕೀಪರ್​ ನೂರುಲ್ ಹಸನ್ 13 ರನ್​, ತಸ್ಕಿನ್ ಅಹ್ಮದ್ 0, ಮೊಸದ್ದೆಕ್ ಹೊಸೈನ್ 20 ರನ್​ ಮತ್ತು ಹಸನ್ ಮಹಮೂದ್ ಖಾತೆ ತೆಗೆಯದೇ ಅಜೇಯರಾಗಿ ಉಳಿದರು.
ನೆದರ್ಲೆಂಡ್ ಪರ ಪಾಲ್ ವ್ಯಾನ್ ಮೀಕೆರೆನ್ ಮತ್ತು ಬಾಸ್ ಡಿ ಲೀಡ್ ತಲಾ ಎರಡೆರಡು ವಿಕೆಟ್​ಗಳನ್ನು ಕಬಳಿಸಿದ್ರೆ, ಟಿಮ್ ಪ್ರಿಂಗಲ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್ ತಲಾ ಒಂದೊಂದು ವಿಕೆಟ್​ ಪಡೆದರು.

ಆರಂಭದಲ್ಲೇ ಮುಗ್ಗರಿಸಿದ ನೆದರ್ಲೆಂಡ್​​: ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ ತಂಡ ಆರಂಭದಿಂದಲೇ ಕುಸಿತಕ್ಕೊಳಗಾಯಿತು. ಪವರ್​ ಪ್ಲೇನಲ್ಲಿ ನಾಲ್ಕು ಪ್ರಮುಖ ನಾಲ್ಕು ವಿಕೆಟ್​ಗಳನ್ನು ಕಳೆದುಕೊಂಡ ನೆದರ್ಲೆಂಡ್ ತಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತು. ಕಾಲಿನ್ ಅಕರ್ಮನ್ ಒಂದೆಡೆಯಿಂದ ಬಾಂಗ್ಲಾದೇಶ ಬೌಲರ್​ಗಳನ್ನು ದಂಡಿಸುತ್ತಾ ಬಂದರೆ ಇನ್ನೊಂದೆಡೆ ಇವರಿಗೆ ಸಾಥ್​ ನೀಡದೇ ಆಟಗಾರರು ಪೆವಿಲಿಯನ್​ ಹಾದಿ ಹಿಡಿಯುತ್ತಿದ್ದರು. ಇದರ ಮಧ್ಯಯೂ ಕಾಲಿನ್ ಅಕರ್ಮನ್ ಬಾಂಗ್ಲದೇಶ ವಿರುದ್ಧ ಅರ್ಧ ಶತಕ ಗಳಿಸಿ ಮಿಂಚಿದರು.
ಇನ್ನು ಕಾಲಿನ್​ ಅಕರ್ಮನ್​ ಔಟಾದ ಬಳಿಕ ಬೌಲಿಂಗ್​ನಲ್ಲಿ ಮಿಂಚಿದ್ದ ಪಾಲ್ ವ್ಯಾನ್ ಮೀಕೆರೆನ್ ಬಾಂಗ್ಲಾದೇಶಕ್ಕೆ ಸೋಲಿನ ಭೀತಿ ತೊರಿಸಿದರು. 14 ಎಸೆತಗಳಲ್ಲಿ 24 ರನ್​ಗಳಿಸಿ ನೆದರ್ಲೆಂಡ್​ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ ನಿಗದಿತ 20 ಓವರ್​ಗಳಲ್ಲಿ ನೆದರ್ಲ್ಯಾಂಡ್​ ತಂಡ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡ 135 ರನ್​ಗಳನ್ನು ಕಲೆ ಹಾಕುವ ಮೂಲಕ 9 ರನ್​ಗಳ ಸೋಲು ಕಂಡಿತು.
ನೆದರ್ಲೆಂಡ್​ ​ ಪರ ಮ್ಯಾಕ್ಸ್ ಆಡ್ 8 ರನ್​, ವಿಕ್ರಮಜಿತ್ ಸಿಂಗ್ 0, ಬಾಸ್ ಡಿ ಲೀಡ್ 0, ಟಾಮ್ ಕೂಪರ್ 0, ನಾಯಕ ಮತ್ತು ವಿಕೆಟ್​ ಕೀಪರ್​ ಸ್ಕಾಟ್ ಎಡ್ವರ್ಡ್ಸ್ 16 ರನ್​, ಟಿಮ್ ಪ್ರಿಂಗಲ್ 1 ರನ್​, ಲೋಗನ್ ವ್ಯಾನ್ ಬೀಕ್ 2 ರನ್​, ಶರೀಜ್ ಅಹ್ಮದ್ 9 ರನ್​, ಕಾಲಿನ್ ಅಕರ್ಮನ್ 62 ರನ್​, ಫ್ರೆಡ್ ಕ್ಲಾಸೆನ್ 7 ರನ್ ಗಳಿಸಿ ಅಜೇರಾಗಿ ಉಳಿದ್ರೆ, ಪಾಲ್ ವ್ಯಾನ್ ಮೀಕೆರೆನ್ 24 ರನ್​ಗಳಿಸಿ ಔಟಾದರು.
ಬಾಂಗ್ಲಾದೇಶ ಪರ ತಸ್ಕಿನ್ ಅಹ್ಮದ್ 4 ವಿಕೆಟ್​ ಪಡೆದು ಮಿಂಚಿದ್ರೆ, ಹಸನ್ ಮಹಮೂದ್ 2 ವಿಕೆಟ್​ ಕಬಳಿಸಿದರು. ನಾಯಕ ಶಕೀಬ್ ಅಲ್ ಹಸನ್ ಮತ್ತು ಸೌಮ್ಯ ಸರ್ಕಾರ್ ತಲಾ ಒಂದೊಂದು ವಿಕೆಟ್​ ಪಡೆದುಕೊಂಡರು.
ಮೊದಲ ಸುತ್ತಿನಲ್ಲಿ ಆಡಿದ್ದ ನೆದರ್ಲೆಂಡ್ಸ್ ತಂಡ: ಟೂರ್ನಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಮೊದಲ ಪಂದ್ಯವಾಗಿದೆ. ನೆದರ್ಲೆಂಡ್ ತಂಡವು ಮೊದಲ ಸುತ್ತಿನಲ್ಲಿ ಆಡಿದ ನಂತರ ಸೂಪರ್-12 ತಲುಪಿತ್ತು. ನೆದರ್ಲೆಂಡ್​ ತಂಡ ಯುಎಇ ಮತ್ತು ನಮೀಬಿಯಾವನ್ನು ಸೋಲಿಸಿತ್ತು. ಶ್ರೀಲಂಕಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ನೆದರ್ಲೆಂಡ್ ಸೋಲನ್ನಪ್ಪಿಕೊಂಡಿತ್ತು. ಈ ಪಂದ್ಯವೂ ಕೈ ಚೆಲ್ಲುವ ಮೂಲಕ ನೆದರ್ಲೆಂಡ್​ಗೆ ಸತತ ಎರಡನೇ ಸೋಲು ಕಂಡಂತಾಗಿದೆ

andolanait

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

26 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

56 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

1 hour ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago