ಕ್ರೀಡೆ

ICC T20 ವಿಶ್ವಕಪ್​: ನೆದರ್ಲೆಂಡ್​ ವಿರುದ್ಧ ಸೋಲಿನ ಭೀತಿಯಲ್ಲಿ ಗೆದ್ದ ಬಾಂಗ್ಲಾದೇಶ

ಹೋಬಾರ್ಟ್: ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ನೆದರ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಸೋಮವಾರ (ಅಕ್ಟೋಬರ್ 24) ಹೋಬಾರ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನೆದರ್ಲೆಂಡ್ಸ್ ತಂಡ ಬಾಂಗ್ಲಾದೇಶದ ಆಟಗಾರರನ್ನು 144 ರನ್​ಗಳಿಗೆ ಕಟ್ಟಿ ಹಾಕಿತ್ತು. 144 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲೆಂಡ್​ ತಂಡ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿತು.
ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಬಾಂಗ್ಲಾದೇಶ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 144 ರನ್ ಗಳಿಸಿತು. ಈ ಪಂದ್ಯದಲ್ಲಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಶಾಕಿಬ್ ಅಲ್ ಹಸನ್ ಹಾಗೂ ಲಿಟನ್ ದಾಸ್​ ವಿಫಲರಾದರು.
ತಂಡದ ಪರ ನಜ್ಮುಲ್ ಹೊಸೈನ್ ಶಾಂಟೊ 25 ರನ್​, ಸೌಮ್ಯ ಸರ್ಕಾರ್ 14 ರನ್​, ಲಿಟನ್ ದಾಸ್ 9 ರನ್​, ನಾಯಕ ಶಕೀಬ್ ಅಲ್ ಹಸನ್ 7 ರನ್​, ಅಫೀಫ್ ಹೊಸೈನ್ 38 ರನ್​, ಯಾಸಿರ್ ಅಲಿ 3, ವಿಕೆಟ್​ ಕೀಪರ್​ ನೂರುಲ್ ಹಸನ್ 13 ರನ್​, ತಸ್ಕಿನ್ ಅಹ್ಮದ್ 0, ಮೊಸದ್ದೆಕ್ ಹೊಸೈನ್ 20 ರನ್​ ಮತ್ತು ಹಸನ್ ಮಹಮೂದ್ ಖಾತೆ ತೆಗೆಯದೇ ಅಜೇಯರಾಗಿ ಉಳಿದರು.
ನೆದರ್ಲೆಂಡ್ ಪರ ಪಾಲ್ ವ್ಯಾನ್ ಮೀಕೆರೆನ್ ಮತ್ತು ಬಾಸ್ ಡಿ ಲೀಡ್ ತಲಾ ಎರಡೆರಡು ವಿಕೆಟ್​ಗಳನ್ನು ಕಬಳಿಸಿದ್ರೆ, ಟಿಮ್ ಪ್ರಿಂಗಲ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್ ತಲಾ ಒಂದೊಂದು ವಿಕೆಟ್​ ಪಡೆದರು.

ಆರಂಭದಲ್ಲೇ ಮುಗ್ಗರಿಸಿದ ನೆದರ್ಲೆಂಡ್​​: ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ ತಂಡ ಆರಂಭದಿಂದಲೇ ಕುಸಿತಕ್ಕೊಳಗಾಯಿತು. ಪವರ್​ ಪ್ಲೇನಲ್ಲಿ ನಾಲ್ಕು ಪ್ರಮುಖ ನಾಲ್ಕು ವಿಕೆಟ್​ಗಳನ್ನು ಕಳೆದುಕೊಂಡ ನೆದರ್ಲೆಂಡ್ ತಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತು. ಕಾಲಿನ್ ಅಕರ್ಮನ್ ಒಂದೆಡೆಯಿಂದ ಬಾಂಗ್ಲಾದೇಶ ಬೌಲರ್​ಗಳನ್ನು ದಂಡಿಸುತ್ತಾ ಬಂದರೆ ಇನ್ನೊಂದೆಡೆ ಇವರಿಗೆ ಸಾಥ್​ ನೀಡದೇ ಆಟಗಾರರು ಪೆವಿಲಿಯನ್​ ಹಾದಿ ಹಿಡಿಯುತ್ತಿದ್ದರು. ಇದರ ಮಧ್ಯಯೂ ಕಾಲಿನ್ ಅಕರ್ಮನ್ ಬಾಂಗ್ಲದೇಶ ವಿರುದ್ಧ ಅರ್ಧ ಶತಕ ಗಳಿಸಿ ಮಿಂಚಿದರು.
ಇನ್ನು ಕಾಲಿನ್​ ಅಕರ್ಮನ್​ ಔಟಾದ ಬಳಿಕ ಬೌಲಿಂಗ್​ನಲ್ಲಿ ಮಿಂಚಿದ್ದ ಪಾಲ್ ವ್ಯಾನ್ ಮೀಕೆರೆನ್ ಬಾಂಗ್ಲಾದೇಶಕ್ಕೆ ಸೋಲಿನ ಭೀತಿ ತೊರಿಸಿದರು. 14 ಎಸೆತಗಳಲ್ಲಿ 24 ರನ್​ಗಳಿಸಿ ನೆದರ್ಲೆಂಡ್​ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ ನಿಗದಿತ 20 ಓವರ್​ಗಳಲ್ಲಿ ನೆದರ್ಲ್ಯಾಂಡ್​ ತಂಡ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡ 135 ರನ್​ಗಳನ್ನು ಕಲೆ ಹಾಕುವ ಮೂಲಕ 9 ರನ್​ಗಳ ಸೋಲು ಕಂಡಿತು.
ನೆದರ್ಲೆಂಡ್​ ​ ಪರ ಮ್ಯಾಕ್ಸ್ ಆಡ್ 8 ರನ್​, ವಿಕ್ರಮಜಿತ್ ಸಿಂಗ್ 0, ಬಾಸ್ ಡಿ ಲೀಡ್ 0, ಟಾಮ್ ಕೂಪರ್ 0, ನಾಯಕ ಮತ್ತು ವಿಕೆಟ್​ ಕೀಪರ್​ ಸ್ಕಾಟ್ ಎಡ್ವರ್ಡ್ಸ್ 16 ರನ್​, ಟಿಮ್ ಪ್ರಿಂಗಲ್ 1 ರನ್​, ಲೋಗನ್ ವ್ಯಾನ್ ಬೀಕ್ 2 ರನ್​, ಶರೀಜ್ ಅಹ್ಮದ್ 9 ರನ್​, ಕಾಲಿನ್ ಅಕರ್ಮನ್ 62 ರನ್​, ಫ್ರೆಡ್ ಕ್ಲಾಸೆನ್ 7 ರನ್ ಗಳಿಸಿ ಅಜೇರಾಗಿ ಉಳಿದ್ರೆ, ಪಾಲ್ ವ್ಯಾನ್ ಮೀಕೆರೆನ್ 24 ರನ್​ಗಳಿಸಿ ಔಟಾದರು.
ಬಾಂಗ್ಲಾದೇಶ ಪರ ತಸ್ಕಿನ್ ಅಹ್ಮದ್ 4 ವಿಕೆಟ್​ ಪಡೆದು ಮಿಂಚಿದ್ರೆ, ಹಸನ್ ಮಹಮೂದ್ 2 ವಿಕೆಟ್​ ಕಬಳಿಸಿದರು. ನಾಯಕ ಶಕೀಬ್ ಅಲ್ ಹಸನ್ ಮತ್ತು ಸೌಮ್ಯ ಸರ್ಕಾರ್ ತಲಾ ಒಂದೊಂದು ವಿಕೆಟ್​ ಪಡೆದುಕೊಂಡರು.
ಮೊದಲ ಸುತ್ತಿನಲ್ಲಿ ಆಡಿದ್ದ ನೆದರ್ಲೆಂಡ್ಸ್ ತಂಡ: ಟೂರ್ನಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಮೊದಲ ಪಂದ್ಯವಾಗಿದೆ. ನೆದರ್ಲೆಂಡ್ ತಂಡವು ಮೊದಲ ಸುತ್ತಿನಲ್ಲಿ ಆಡಿದ ನಂತರ ಸೂಪರ್-12 ತಲುಪಿತ್ತು. ನೆದರ್ಲೆಂಡ್​ ತಂಡ ಯುಎಇ ಮತ್ತು ನಮೀಬಿಯಾವನ್ನು ಸೋಲಿಸಿತ್ತು. ಶ್ರೀಲಂಕಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ನೆದರ್ಲೆಂಡ್ ಸೋಲನ್ನಪ್ಪಿಕೊಂಡಿತ್ತು. ಈ ಪಂದ್ಯವೂ ಕೈ ಚೆಲ್ಲುವ ಮೂಲಕ ನೆದರ್ಲೆಂಡ್​ಗೆ ಸತತ ಎರಡನೇ ಸೋಲು ಕಂಡಂತಾಗಿದೆ

andolanait

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

7 mins ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

9 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

11 mins ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

14 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

16 mins ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

23 mins ago