ಹೋಬಾರ್ಟ್: ಟಿ20 ವಿಶ್ವಕಪ್ನ 17ನೇ ಪಂದ್ಯದಲ್ಲಿ ನೆದರ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಸೋಮವಾರ (ಅಕ್ಟೋಬರ್ 24) ಹೋಬಾರ್ಟ್ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನೆದರ್ಲೆಂಡ್ಸ್ ತಂಡ ಬಾಂಗ್ಲಾದೇಶದ ಆಟಗಾರರನ್ನು 144 ರನ್ಗಳಿಗೆ ಕಟ್ಟಿ ಹಾಕಿತ್ತು. 144 ರನ್ಗಳ ಗುರಿ ಬೆನ್ನಟ್ಟಿದ ನೆದರ್ಲೆಂಡ್ ತಂಡ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ 20 ಓವರ್ಗಳಲ್ಲಿ ಎಂಟು ವಿಕೆಟ್ಗಳ ನಷ್ಟಕ್ಕೆ 144 ರನ್ ಗಳಿಸಿತು. ಈ ಪಂದ್ಯದಲ್ಲಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಶಾಕಿಬ್ ಅಲ್ ಹಸನ್ ಹಾಗೂ ಲಿಟನ್ ದಾಸ್ ವಿಫಲರಾದರು.
ತಂಡದ ಪರ ನಜ್ಮುಲ್ ಹೊಸೈನ್ ಶಾಂಟೊ 25 ರನ್, ಸೌಮ್ಯ ಸರ್ಕಾರ್ 14 ರನ್, ಲಿಟನ್ ದಾಸ್ 9 ರನ್, ನಾಯಕ ಶಕೀಬ್ ಅಲ್ ಹಸನ್ 7 ರನ್, ಅಫೀಫ್ ಹೊಸೈನ್ 38 ರನ್, ಯಾಸಿರ್ ಅಲಿ 3, ವಿಕೆಟ್ ಕೀಪರ್ ನೂರುಲ್ ಹಸನ್ 13 ರನ್, ತಸ್ಕಿನ್ ಅಹ್ಮದ್ 0, ಮೊಸದ್ದೆಕ್ ಹೊಸೈನ್ 20 ರನ್ ಮತ್ತು ಹಸನ್ ಮಹಮೂದ್ ಖಾತೆ ತೆಗೆಯದೇ ಅಜೇಯರಾಗಿ ಉಳಿದರು.
ನೆದರ್ಲೆಂಡ್ ಪರ ಪಾಲ್ ವ್ಯಾನ್ ಮೀಕೆರೆನ್ ಮತ್ತು ಬಾಸ್ ಡಿ ಲೀಡ್ ತಲಾ ಎರಡೆರಡು ವಿಕೆಟ್ಗಳನ್ನು ಕಬಳಿಸಿದ್ರೆ, ಟಿಮ್ ಪ್ರಿಂಗಲ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್ ತಲಾ ಒಂದೊಂದು ವಿಕೆಟ್ ಪಡೆದರು.
ಆರಂಭದಲ್ಲೇ ಮುಗ್ಗರಿಸಿದ ನೆದರ್ಲೆಂಡ್: ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ ತಂಡ ಆರಂಭದಿಂದಲೇ ಕುಸಿತಕ್ಕೊಳಗಾಯಿತು. ಪವರ್ ಪ್ಲೇನಲ್ಲಿ ನಾಲ್ಕು ಪ್ರಮುಖ ನಾಲ್ಕು ವಿಕೆಟ್ಗಳನ್ನು ಕಳೆದುಕೊಂಡ ನೆದರ್ಲೆಂಡ್ ತಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತು. ಕಾಲಿನ್ ಅಕರ್ಮನ್ ಒಂದೆಡೆಯಿಂದ ಬಾಂಗ್ಲಾದೇಶ ಬೌಲರ್ಗಳನ್ನು ದಂಡಿಸುತ್ತಾ ಬಂದರೆ ಇನ್ನೊಂದೆಡೆ ಇವರಿಗೆ ಸಾಥ್ ನೀಡದೇ ಆಟಗಾರರು ಪೆವಿಲಿಯನ್ ಹಾದಿ ಹಿಡಿಯುತ್ತಿದ್ದರು. ಇದರ ಮಧ್ಯಯೂ ಕಾಲಿನ್ ಅಕರ್ಮನ್ ಬಾಂಗ್ಲದೇಶ ವಿರುದ್ಧ ಅರ್ಧ ಶತಕ ಗಳಿಸಿ ಮಿಂಚಿದರು.
ಇನ್ನು ಕಾಲಿನ್ ಅಕರ್ಮನ್ ಔಟಾದ ಬಳಿಕ ಬೌಲಿಂಗ್ನಲ್ಲಿ ಮಿಂಚಿದ್ದ ಪಾಲ್ ವ್ಯಾನ್ ಮೀಕೆರೆನ್ ಬಾಂಗ್ಲಾದೇಶಕ್ಕೆ ಸೋಲಿನ ಭೀತಿ ತೊರಿಸಿದರು. 14 ಎಸೆತಗಳಲ್ಲಿ 24 ರನ್ಗಳಿಸಿ ನೆದರ್ಲೆಂಡ್ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ ನಿಗದಿತ 20 ಓವರ್ಗಳಲ್ಲಿ ನೆದರ್ಲ್ಯಾಂಡ್ ತಂಡ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡ 135 ರನ್ಗಳನ್ನು ಕಲೆ ಹಾಕುವ ಮೂಲಕ 9 ರನ್ಗಳ ಸೋಲು ಕಂಡಿತು.
ನೆದರ್ಲೆಂಡ್ ಪರ ಮ್ಯಾಕ್ಸ್ ಆಡ್ 8 ರನ್, ವಿಕ್ರಮಜಿತ್ ಸಿಂಗ್ 0, ಬಾಸ್ ಡಿ ಲೀಡ್ 0, ಟಾಮ್ ಕೂಪರ್ 0, ನಾಯಕ ಮತ್ತು ವಿಕೆಟ್ ಕೀಪರ್ ಸ್ಕಾಟ್ ಎಡ್ವರ್ಡ್ಸ್ 16 ರನ್, ಟಿಮ್ ಪ್ರಿಂಗಲ್ 1 ರನ್, ಲೋಗನ್ ವ್ಯಾನ್ ಬೀಕ್ 2 ರನ್, ಶರೀಜ್ ಅಹ್ಮದ್ 9 ರನ್, ಕಾಲಿನ್ ಅಕರ್ಮನ್ 62 ರನ್, ಫ್ರೆಡ್ ಕ್ಲಾಸೆನ್ 7 ರನ್ ಗಳಿಸಿ ಅಜೇರಾಗಿ ಉಳಿದ್ರೆ, ಪಾಲ್ ವ್ಯಾನ್ ಮೀಕೆರೆನ್ 24 ರನ್ಗಳಿಸಿ ಔಟಾದರು.
ಬಾಂಗ್ಲಾದೇಶ ಪರ ತಸ್ಕಿನ್ ಅಹ್ಮದ್ 4 ವಿಕೆಟ್ ಪಡೆದು ಮಿಂಚಿದ್ರೆ, ಹಸನ್ ಮಹಮೂದ್ 2 ವಿಕೆಟ್ ಕಬಳಿಸಿದರು. ನಾಯಕ ಶಕೀಬ್ ಅಲ್ ಹಸನ್ ಮತ್ತು ಸೌಮ್ಯ ಸರ್ಕಾರ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
ಮೊದಲ ಸುತ್ತಿನಲ್ಲಿ ಆಡಿದ್ದ ನೆದರ್ಲೆಂಡ್ಸ್ ತಂಡ: ಟೂರ್ನಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಮೊದಲ ಪಂದ್ಯವಾಗಿದೆ. ನೆದರ್ಲೆಂಡ್ ತಂಡವು ಮೊದಲ ಸುತ್ತಿನಲ್ಲಿ ಆಡಿದ ನಂತರ ಸೂಪರ್-12 ತಲುಪಿತ್ತು. ನೆದರ್ಲೆಂಡ್ ತಂಡ ಯುಎಇ ಮತ್ತು ನಮೀಬಿಯಾವನ್ನು ಸೋಲಿಸಿತ್ತು. ಶ್ರೀಲಂಕಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ನೆದರ್ಲೆಂಡ್ ಸೋಲನ್ನಪ್ಪಿಕೊಂಡಿತ್ತು. ಈ ಪಂದ್ಯವೂ ಕೈ ಚೆಲ್ಲುವ ಮೂಲಕ ನೆದರ್ಲೆಂಡ್ಗೆ ಸತತ ಎರಡನೇ ಸೋಲು ಕಂಡಂತಾಗಿದೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…