ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿತು.
ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತು. ಹರಿಣಗಳ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಪ್ರತ್ಯುತ್ತರವಾಗಿ ಟೀಂ ಇಂಡಿಯಾದ ರನ್ ಮೆಷಿನ್ ಬ್ಯಾಟ್ ಬೀಸಿದರು. ನಿಧಾನಗತಿಯಿಂದ ಇನ್ನಿಂಗ್ಸ್ ಕಟ್ಟಿದ ವಿರಾಟ್ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಇವರಿಗೆ ಶಿವಂ ದುಬೆ 27(16) ರನ್ ಬಾರಿಸಿ ಸಾಥ್ ನೀಡಿದರು.
ಉಳಿದಂತೆ ಅಕ್ಷರ್ ಪಟೇಲ್ 47(31) ರನ್, ನಾಯಕ ರೋಹಿತ್ ಶರ್ಮಾ 9(5) ರನ್, ರಿಷಭ್ ಪಂತ್ ಡಕ್ಔಟ್, ಸೂರ್ಯಕುಮಾರ್ ಯಾದವ್ 3(4)ರನ್, ಹಾರ್ದಿಕ್ ಪಾಂಡ್ಯ ಔಟಾಗದೇ 5(2) ರನ್, ರವೀಂದ್ರ ಜಡೇಜಾ 2(2) ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಹಾಗೂ ನೋಕಿಯೋ 2, ರಬಾಡ ಮತ್ತ ಮಾರ್ಕೋ ಎನ್ಸರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…