ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿತು.
ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತು. ಹರಿಣಗಳ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಪ್ರತ್ಯುತ್ತರವಾಗಿ ಟೀಂ ಇಂಡಿಯಾದ ರನ್ ಮೆಷಿನ್ ಬ್ಯಾಟ್ ಬೀಸಿದರು. ನಿಧಾನಗತಿಯಿಂದ ಇನ್ನಿಂಗ್ಸ್ ಕಟ್ಟಿದ ವಿರಾಟ್ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಇವರಿಗೆ ಶಿವಂ ದುಬೆ 27(16) ರನ್ ಬಾರಿಸಿ ಸಾಥ್ ನೀಡಿದರು.
ಉಳಿದಂತೆ ಅಕ್ಷರ್ ಪಟೇಲ್ 47(31) ರನ್, ನಾಯಕ ರೋಹಿತ್ ಶರ್ಮಾ 9(5) ರನ್, ರಿಷಭ್ ಪಂತ್ ಡಕ್ಔಟ್, ಸೂರ್ಯಕುಮಾರ್ ಯಾದವ್ 3(4)ರನ್, ಹಾರ್ದಿಕ್ ಪಾಂಡ್ಯ ಔಟಾಗದೇ 5(2) ರನ್, ರವೀಂದ್ರ ಜಡೇಜಾ 2(2) ರನ್ ಕಲೆಹಾಕಿದರು.
ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಹಾಗೂ ನೋಕಿಯೋ 2, ರಬಾಡ ಮತ್ತ ಮಾರ್ಕೋ ಎನ್ಸರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…