ಆಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್ಗೆ ನೇರ ಅರ್ಹತೆ ಪಡೆದುಕೊಂಡಿತು.
ಇನ್ನು ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ತಂಡದ ಉಪನಾಯಕ ಹಾರ್ದಿಕ್ ಪಾಂಡ್ಯ, ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುವ ವಿಧಾನವನ್ನು ನಾವು ಸುಧಾರಿಸಬೇಕಿದೆ ಎಂದು ತಂಡದ ನ್ಯೂನತೆ ಬಗ್ಗೆ ಇದೇ ಮೊದಲ ಬಾರಿಗೆ ಪಾಂಡ್ಯ ಮಾತನಾಡಿದ್ದಾರೆ.
ಇದೇ ವರ್ಷ ನಡೆದ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನ ವಹಿಸಿಕೊಂಡ ಬಳಿಕ ತೀರ ಕಳಪೆ ಪ್ರದರ್ಶನ ತೋರಿದರು. ಎಲ್ಲರಿಂದಲೂ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್ ಟೀಂ ಇಂಡಿಯಾ ಪರವಾಗಿ ಉತ್ತಮ ಪ್ರದರ್ಶನ ತೋರಿದರು.
ಬಾಂಗ್ಲಾದೇಶ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ತೋರಿದ ಹಾರ್ದಿಕ್ ತಂಡದ ಗೆಲುವಿಗೆ ಶ್ರಮಿಸಿದರು. ಈ ಬಳಿಕ ಮಾತನಾಡಿದ ಅವರು, ನಾವು ಒಂದು ತಂಡವಾಗಿ ಉತ್ತಮವಾಗಿ ಆಡುತ್ತಿದ್ದೇವೆ. ಆದರೆ ಹಲವು ವಿಭಾಗಗಳಲ್ಲಿ ನಾವು ಸುಧಾರಿಸುಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.
ನಮ್ಮ ತಂಡದಲ್ಲಿ ವೇಗವಾಗಿ ವಿಕೆಟ್ಗಳನ್ನು ಕಳೆದುಕೊಳ್ಳುವುದನ್ನು ನಾವು ಸುಧಾರಿಸಿದ್ದಲ್ಲಿ, ತಂಡ ಇನ್ನು ಶ್ರೇಷ್ಠ ಪ್ರದರ್ಶನ ನೀಡಬಹುದಾಗಿದೆ. ಸದ್ಯ ತಂಡ ಉತ್ತಮವಾಗಿ ಆಡುತ್ತಿದ್ದು, ಎಲ್ಲರೂ ತಮ್ಮ ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಇದು ಪಂದ್ಯದ ಗೆಲುವಿಗೆ ಸಹಕಾರಿಯಾಗುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…