ಕ್ರೀಡೆ

ICC t20 worldcup 2024: ಅಫ್ಘಾನ್‌ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಬರೆದ ಕಮಿನ್ಸ್‌

ಸೇಂಟ್‌ ವಿನ್ಸೆಂಟ್‌: ಇಲ್ಲಿನ ಅರ್ನೋಸ್‌ ವೇಲ್‌ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಸೀಸ್‌ ತಂಡ ಮಾಜಿ ನಾಯಕ ಪ್ಯಾಟ್‌ ಕಮಿನ್ಸ್‌ ನೂತನ ವಿಶ್ವ ದಾಖಲೆ ನಿರ್ಮಿಸಿದರು.

ಟಿ20 ವಿಶ್ವಕಪ್‌ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗುವ ಮೂಲಕ ಪ್ಯಾಟ್‌ ಕಮಿನ್ಸ್‌ ನೂತನ ದಾಖಲೆ ರಚಿಸಿದರು.

ಟಿ20 ವಿಶ್ವಕಪ್‌ನಲ್ಲಿ ಈವರೆಗೆ ಒಟ್ಟು 7 ಜನರು ಮಾತ್ರ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ್ದಾರೆ. ಆದರೆ ಪ್ಯಾಟ್‌ ಕಮಿನ್ಸ್‌ ಮಾತ್ರ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಗೊಂಚಲು ಕಿತ್ತಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಮೊದಲ ಹ್ಯಾಟ್ರಿಕ್‌ ಪಡೆದಿದ್ದ ಕಮಿನ್ಸ್‌ ಬಳಿಕ ಇಂದು (ಜೂನ್..‌23) ರಂದು ನಡೆದ ಅಫ್ಘಾನ್‌ ಮತ್ತು ಆಸೀಸ್‌ ನಡುವಿನ ಪಂದ್ಯದಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದಾರೆ.

18ನೇ ಓವರ್‌ನ ಕೊನೆಯ ಎಸೆತದಲ್ಲಿ ಅಫ್ಘಾನ್‌ ನಾಯಕ ರಶೀದ್‌ ಖಾನ್‌ ಅವರನ್ನು ಔಟ್‌ ಮಾಡಿದರು. ಮತ್ತು 20ನೇ ಓವರ್‌ ಮೊದಲೆರೆಡು ಎಸೆತಗಳಲ್ಲಿ ಕರೀಮ್‌ ಜನ್ನತ್‌ ಹಾಗೂ ಗುಲ್ಬದೀನ್‌ ನೈಬ್‌ ಅವರನ್ನು ಪೆವಿಲಿಯನ್‌ನತ್ತ ಕಳುಹಿಸುವ ಮೂಲಕ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ 149ರನ್‌ ಗಳ ಗುರಿಯನ್ನು ಆಸೀಸ್‌ ತಂಡಕ್ಕೆ ನೀಡಿತು. ಇನ್ನು ಈ ಮೊತ್ತ ಬೆನ್ನತ್ತುವಲ್ಲಿ ವಿಫಲರಾದ ಆಸ್ಟ್ರೇಲಿಯಾ ಆಟಗಾರರು ಆಲ್ಔಟ್‌ ಆಗುವ ಮೂಲಕ ಕೇವಲ 127ರನ್‌ ಗಳಿಸಿ 21ರನ್‌ಗಳ ಅಂತರದಿಂದ ಸೋಲು ಕಂಡರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

11 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago