ಕ್ರೀಡೆ

ICC t20 worldcup 2024: ಅಫ್ಘಾನ್‌ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಬರೆದ ಕಮಿನ್ಸ್‌

ಸೇಂಟ್‌ ವಿನ್ಸೆಂಟ್‌: ಇಲ್ಲಿನ ಅರ್ನೋಸ್‌ ವೇಲ್‌ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಸೀಸ್‌ ತಂಡ ಮಾಜಿ ನಾಯಕ ಪ್ಯಾಟ್‌ ಕಮಿನ್ಸ್‌ ನೂತನ ವಿಶ್ವ ದಾಖಲೆ ನಿರ್ಮಿಸಿದರು.

ಟಿ20 ವಿಶ್ವಕಪ್‌ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗುವ ಮೂಲಕ ಪ್ಯಾಟ್‌ ಕಮಿನ್ಸ್‌ ನೂತನ ದಾಖಲೆ ರಚಿಸಿದರು.

ಟಿ20 ವಿಶ್ವಕಪ್‌ನಲ್ಲಿ ಈವರೆಗೆ ಒಟ್ಟು 7 ಜನರು ಮಾತ್ರ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ್ದಾರೆ. ಆದರೆ ಪ್ಯಾಟ್‌ ಕಮಿನ್ಸ್‌ ಮಾತ್ರ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಗೊಂಚಲು ಕಿತ್ತಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಮೊದಲ ಹ್ಯಾಟ್ರಿಕ್‌ ಪಡೆದಿದ್ದ ಕಮಿನ್ಸ್‌ ಬಳಿಕ ಇಂದು (ಜೂನ್..‌23) ರಂದು ನಡೆದ ಅಫ್ಘಾನ್‌ ಮತ್ತು ಆಸೀಸ್‌ ನಡುವಿನ ಪಂದ್ಯದಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದಾರೆ.

18ನೇ ಓವರ್‌ನ ಕೊನೆಯ ಎಸೆತದಲ್ಲಿ ಅಫ್ಘಾನ್‌ ನಾಯಕ ರಶೀದ್‌ ಖಾನ್‌ ಅವರನ್ನು ಔಟ್‌ ಮಾಡಿದರು. ಮತ್ತು 20ನೇ ಓವರ್‌ ಮೊದಲೆರೆಡು ಎಸೆತಗಳಲ್ಲಿ ಕರೀಮ್‌ ಜನ್ನತ್‌ ಹಾಗೂ ಗುಲ್ಬದೀನ್‌ ನೈಬ್‌ ಅವರನ್ನು ಪೆವಿಲಿಯನ್‌ನತ್ತ ಕಳುಹಿಸುವ ಮೂಲಕ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ 149ರನ್‌ ಗಳ ಗುರಿಯನ್ನು ಆಸೀಸ್‌ ತಂಡಕ್ಕೆ ನೀಡಿತು. ಇನ್ನು ಈ ಮೊತ್ತ ಬೆನ್ನತ್ತುವಲ್ಲಿ ವಿಫಲರಾದ ಆಸ್ಟ್ರೇಲಿಯಾ ಆಟಗಾರರು ಆಲ್ಔಟ್‌ ಆಗುವ ಮೂಲಕ ಕೇವಲ 127ರನ್‌ ಗಳಿಸಿ 21ರನ್‌ಗಳ ಅಂತರದಿಂದ ಸೋಲು ಕಂಡರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

51 seconds ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

21 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

24 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

50 mins ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

5 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago