ಕ್ರೀಡೆ

ICC t20 worldcup 2024: ಅಫ್ಘಾನ್‌ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಬರೆದ ಕಮಿನ್ಸ್‌

ಸೇಂಟ್‌ ವಿನ್ಸೆಂಟ್‌: ಇಲ್ಲಿನ ಅರ್ನೋಸ್‌ ವೇಲ್‌ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಸೀಸ್‌ ತಂಡ ಮಾಜಿ ನಾಯಕ ಪ್ಯಾಟ್‌ ಕಮಿನ್ಸ್‌ ನೂತನ ವಿಶ್ವ ದಾಖಲೆ ನಿರ್ಮಿಸಿದರು.

ಟಿ20 ವಿಶ್ವಕಪ್‌ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗುವ ಮೂಲಕ ಪ್ಯಾಟ್‌ ಕಮಿನ್ಸ್‌ ನೂತನ ದಾಖಲೆ ರಚಿಸಿದರು.

ಟಿ20 ವಿಶ್ವಕಪ್‌ನಲ್ಲಿ ಈವರೆಗೆ ಒಟ್ಟು 7 ಜನರು ಮಾತ್ರ ಹ್ಯಾಟ್ರಿಕ್‌ ವಿಕೆಟ್‌ ಕಬಳಿಸಿದ್ದಾರೆ. ಆದರೆ ಪ್ಯಾಟ್‌ ಕಮಿನ್ಸ್‌ ಮಾತ್ರ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಹ್ಯಾಟ್ರಿಕ್‌ ವಿಕೆಟ್‌ ಗೊಂಚಲು ಕಿತ್ತಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಮೊದಲ ಹ್ಯಾಟ್ರಿಕ್‌ ಪಡೆದಿದ್ದ ಕಮಿನ್ಸ್‌ ಬಳಿಕ ಇಂದು (ಜೂನ್..‌23) ರಂದು ನಡೆದ ಅಫ್ಘಾನ್‌ ಮತ್ತು ಆಸೀಸ್‌ ನಡುವಿನ ಪಂದ್ಯದಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದಾರೆ.

18ನೇ ಓವರ್‌ನ ಕೊನೆಯ ಎಸೆತದಲ್ಲಿ ಅಫ್ಘಾನ್‌ ನಾಯಕ ರಶೀದ್‌ ಖಾನ್‌ ಅವರನ್ನು ಔಟ್‌ ಮಾಡಿದರು. ಮತ್ತು 20ನೇ ಓವರ್‌ ಮೊದಲೆರೆಡು ಎಸೆತಗಳಲ್ಲಿ ಕರೀಮ್‌ ಜನ್ನತ್‌ ಹಾಗೂ ಗುಲ್ಬದೀನ್‌ ನೈಬ್‌ ಅವರನ್ನು ಪೆವಿಲಿಯನ್‌ನತ್ತ ಕಳುಹಿಸುವ ಮೂಲಕ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ 149ರನ್‌ ಗಳ ಗುರಿಯನ್ನು ಆಸೀಸ್‌ ತಂಡಕ್ಕೆ ನೀಡಿತು. ಇನ್ನು ಈ ಮೊತ್ತ ಬೆನ್ನತ್ತುವಲ್ಲಿ ವಿಫಲರಾದ ಆಸ್ಟ್ರೇಲಿಯಾ ಆಟಗಾರರು ಆಲ್ಔಟ್‌ ಆಗುವ ಮೂಲಕ ಕೇವಲ 127ರನ್‌ ಗಳಿಸಿ 21ರನ್‌ಗಳ ಅಂತರದಿಂದ ಸೋಲು ಕಂಡರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago