ಕ್ರೀಡೆ

ICC t20 worldcup 2024: ಬಾಂಗ್ಲಾದೇಶವನ್ನು ಬಗ್ಗುಬಡಿದ ಭಾರತ; ಸೆಮಿಸ್‌ ಆಸೆ ಜೀವಂತ

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 196 ರನ್‌ ಕೆಲಹಾಕಿ ಎದುರಾಳಿ ತಂಡಕ್ಕೆ 197 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ ಕುಲ್ದೀಪ್‌ ಯಾದವ್‌ ಸ್ಪಿನ್‌ ಮೋಡಿಗೆ ಬಲಿಯಾಗುವ ಮೂಲಕ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿ 50 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಭಾರತ ಇನ್ನಿಂಗ್ಸ್‌: ಸೂಪರ್‌-8ರ ಗ್ರೂಪ್‌ ಹಂತದ ಮಹತ್ವದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಕ್ಕಿತು. ನಾಯಕ ರೋಹಿತ್‌ ಶರ್ಮಾ 23(11)ರನ್‌, ವಿರಾಟ್‌ ಕೊಹ್ಲಿ 37(28)ರನ್‌ ಗಳಿಸಿ ಔಟಾದರು. ಬಳಿಕ ಬಂದ ರಿಷಭ್‌ ಪಂತ್‌ 36(24)ರನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ 6(2)ರನ್‌ ಕಲೆಹಾಕಿ ಬೇಗನೆ ನಿರ್ಗಮಿಸಿದರು.

ತಂಡ ಸಂಕಷ್ಟದಲ್ಲಿದ್ದಾಗ ಶಿವಂ ದುಬೆ ಹಾಗೂ ಉಪ ನಾಯಕ ಹಾರ್ದಿಕ್‌ ಪಾಂಡ್ಯ ಜೊತೆಯಾಗಿ ಚೇತರಿಕೆಯ ಇನ್ನಿಂಗ್ಸ್‌ ಕಟ್ಟಿದರು. ಶಿವಂ ದುಬೆ 34(24)ರನ್‌ ಗಳಿಸಿದರೆ, ಹಾರ್ದಿಕ್‌ ಪಾಂಡ್ಯ ಔಟಾಗದೇ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 50 ರನ್‌ ಗಳಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 3(5) ರನ್‌ ಗಳಿಸಿದರು.

ಬಾಂಗ್ಲಾದೇಶದ ಪರ ಹಸನ್‌ ಶಕೀಬ್‌ ಹಾಗೂ ರಿಷಾದ್‌ ಹೊಸೇನ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು. ಶಕೀಬ್‌ ಅಲ್‌-ಹಸನ್‌ ಒಂದು ವಿಕೆಟ್‌ ಪಡೆದರು.

ಬಾಂಗ್ಲಾದೇಶ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಆರಂಭಿಕ ಆಘಾತ ಎದುರಾಯಿತು. ಲಿಟನ್‌ ದಾಸ್‌ 13(10)ರನ್‌ ಗಳಿಸಿ ಬೇಗನೇ ಔಟಾದರು. ತಂಝೀದ್ ಹಸನ್‌ 29(31) ಮಂದಗತಿಯ ಆಟವಾಡಿ ನಿರ್ಗಮಿಸಿದರು.

ನಾಯಕ ನಜ್ಮುಲ್ ಹುಸೇನ್ ಸ್ಯಾಂಟೋ 40(32) ರನ್‌ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಂಡು ಬರಲಿಲ್ಲ. ಉಳಿದಂತೆ ಹೃದಯ್‌ 4(6) ರನ್‌, ಶಕೀಬ್‌ ಅಲ್-ಹಸನ್‌ 11(7) ರನ್‌, ಮಹ್ಮದುಲ್ಲಾ 13(15)ರನ್‌, ಜಾಕೇರ್‌ ಅಲಿ 1(4) ರನ್‌, ರಶೀದದ ಹೊಸೇನ್‌ 24(10) ರನ್‌, ಮೆಹದಿ ಹಸನ್‌ ಹಾಗೂ ತಂಝೀಮ್‌ ಹಸನ್‌ ಔಟಾಗದೇ ತಲಾ 5 ಹಾಗೂ ಒಂದು ರನ್‌ ಕಲೆ ಹಾಕಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

ಟೀಂ ಇಂಡಿಯಾ ಪರ ಕುಲ್ದಿಪ್‌ ಯಾದವ್‌ 3, ಅರ್ಷ್‌ದೀಪ್‌ ಹಾಗೂ ಬುಮ್ರಾ ತಲಾ ಎರಡು ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

27 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

1 hour ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

1 hour ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

3 hours ago