ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್ಗೆ ನೇರ ಅರ್ಹತೆ ಪಡೆದುಕೊಂಡಿತು.
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕೆಲಹಾಕಿ ಎದುರಾಳಿ ತಂಡಕ್ಕೆ 197 ರನ್ಗಳ ಬೃಹತ್ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ ಕುಲ್ದೀಪ್ ಯಾದವ್ ಸ್ಪಿನ್ ಮೋಡಿಗೆ ಬಲಿಯಾಗುವ ಮೂಲಕ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿ 50 ರನ್ಗಳ ಅಂತರದಿಂದ ಸೋಲನುಭವಿಸಿತು.
ಭಾರತ ಇನ್ನಿಂಗ್ಸ್: ಸೂಪರ್-8ರ ಗ್ರೂಪ್ ಹಂತದ ಮಹತ್ವದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಕ್ಕಿತು. ನಾಯಕ ರೋಹಿತ್ ಶರ್ಮಾ 23(11)ರನ್, ವಿರಾಟ್ ಕೊಹ್ಲಿ 37(28)ರನ್ ಗಳಿಸಿ ಔಟಾದರು. ಬಳಿಕ ಬಂದ ರಿಷಭ್ ಪಂತ್ 36(24)ರನ್ ಹಾಗೂ ಸೂರ್ಯಕುಮಾರ್ ಯಾದವ್ 6(2)ರನ್ ಕಲೆಹಾಕಿ ಬೇಗನೆ ನಿರ್ಗಮಿಸಿದರು.
ತಂಡ ಸಂಕಷ್ಟದಲ್ಲಿದ್ದಾಗ ಶಿವಂ ದುಬೆ ಹಾಗೂ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಯಾಗಿ ಚೇತರಿಕೆಯ ಇನ್ನಿಂಗ್ಸ್ ಕಟ್ಟಿದರು. ಶಿವಂ ದುಬೆ 34(24)ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ ಔಟಾಗದೇ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 50 ರನ್ ಗಳಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಅಕ್ಷರ್ ಪಟೇಲ್ 3(5) ರನ್ ಗಳಿಸಿದರು.
ಬಾಂಗ್ಲಾದೇಶದ ಪರ ಹಸನ್ ಶಕೀಬ್ ಹಾಗೂ ರಿಷಾದ್ ಹೊಸೇನ್ ತಲಾ ಎರಡೆರೆಡು ವಿಕೆಟ್ ಕಬಳಿಸಿದರು. ಶಕೀಬ್ ಅಲ್-ಹಸನ್ ಒಂದು ವಿಕೆಟ್ ಪಡೆದರು.
ಬಾಂಗ್ಲಾದೇಶ ಇನ್ನಿಂಗ್ಸ್: ಟೀಂ ಇಂಡಿಯಾ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಆರಂಭಿಕ ಆಘಾತ ಎದುರಾಯಿತು. ಲಿಟನ್ ದಾಸ್ 13(10)ರನ್ ಗಳಿಸಿ ಬೇಗನೇ ಔಟಾದರು. ತಂಝೀದ್ ಹಸನ್ 29(31) ಮಂದಗತಿಯ ಆಟವಾಡಿ ನಿರ್ಗಮಿಸಿದರು.
ನಾಯಕ ನಜ್ಮುಲ್ ಹುಸೇನ್ ಸ್ಯಾಂಟೋ 40(32) ರನ್ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್ ಕಂಡು ಬರಲಿಲ್ಲ. ಉಳಿದಂತೆ ಹೃದಯ್ 4(6) ರನ್, ಶಕೀಬ್ ಅಲ್-ಹಸನ್ 11(7) ರನ್, ಮಹ್ಮದುಲ್ಲಾ 13(15)ರನ್, ಜಾಕೇರ್ ಅಲಿ 1(4) ರನ್, ರಶೀದದ ಹೊಸೇನ್ 24(10) ರನ್, ಮೆಹದಿ ಹಸನ್ ಹಾಗೂ ತಂಝೀಮ್ ಹಸನ್ ಔಟಾಗದೇ ತಲಾ 5 ಹಾಗೂ ಒಂದು ರನ್ ಕಲೆ ಹಾಕಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.
ಟೀಂ ಇಂಡಿಯಾ ಪರ ಕುಲ್ದಿಪ್ ಯಾದವ್ 3, ಅರ್ಷ್ದೀಪ್ ಹಾಗೂ ಬುಮ್ರಾ ತಲಾ ಎರಡು ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…