ಕ್ರೀಡೆ

ICC t20 worldcup 2024: ಬಾಂಗ್ಲಾದೇಶವನ್ನು ಬಗ್ಗುಬಡಿದ ಭಾರತ; ಸೆಮಿಸ್‌ ಆಸೆ ಜೀವಂತ

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 196 ರನ್‌ ಕೆಲಹಾಕಿ ಎದುರಾಳಿ ತಂಡಕ್ಕೆ 197 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ ಕುಲ್ದೀಪ್‌ ಯಾದವ್‌ ಸ್ಪಿನ್‌ ಮೋಡಿಗೆ ಬಲಿಯಾಗುವ ಮೂಲಕ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿ 50 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಭಾರತ ಇನ್ನಿಂಗ್ಸ್‌: ಸೂಪರ್‌-8ರ ಗ್ರೂಪ್‌ ಹಂತದ ಮಹತ್ವದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಕ್ಕಿತು. ನಾಯಕ ರೋಹಿತ್‌ ಶರ್ಮಾ 23(11)ರನ್‌, ವಿರಾಟ್‌ ಕೊಹ್ಲಿ 37(28)ರನ್‌ ಗಳಿಸಿ ಔಟಾದರು. ಬಳಿಕ ಬಂದ ರಿಷಭ್‌ ಪಂತ್‌ 36(24)ರನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ 6(2)ರನ್‌ ಕಲೆಹಾಕಿ ಬೇಗನೆ ನಿರ್ಗಮಿಸಿದರು.

ತಂಡ ಸಂಕಷ್ಟದಲ್ಲಿದ್ದಾಗ ಶಿವಂ ದುಬೆ ಹಾಗೂ ಉಪ ನಾಯಕ ಹಾರ್ದಿಕ್‌ ಪಾಂಡ್ಯ ಜೊತೆಯಾಗಿ ಚೇತರಿಕೆಯ ಇನ್ನಿಂಗ್ಸ್‌ ಕಟ್ಟಿದರು. ಶಿವಂ ದುಬೆ 34(24)ರನ್‌ ಗಳಿಸಿದರೆ, ಹಾರ್ದಿಕ್‌ ಪಾಂಡ್ಯ ಔಟಾಗದೇ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 50 ರನ್‌ ಗಳಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 3(5) ರನ್‌ ಗಳಿಸಿದರು.

ಬಾಂಗ್ಲಾದೇಶದ ಪರ ಹಸನ್‌ ಶಕೀಬ್‌ ಹಾಗೂ ರಿಷಾದ್‌ ಹೊಸೇನ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು. ಶಕೀಬ್‌ ಅಲ್‌-ಹಸನ್‌ ಒಂದು ವಿಕೆಟ್‌ ಪಡೆದರು.

ಬಾಂಗ್ಲಾದೇಶ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಆರಂಭಿಕ ಆಘಾತ ಎದುರಾಯಿತು. ಲಿಟನ್‌ ದಾಸ್‌ 13(10)ರನ್‌ ಗಳಿಸಿ ಬೇಗನೇ ಔಟಾದರು. ತಂಝೀದ್ ಹಸನ್‌ 29(31) ಮಂದಗತಿಯ ಆಟವಾಡಿ ನಿರ್ಗಮಿಸಿದರು.

ನಾಯಕ ನಜ್ಮುಲ್ ಹುಸೇನ್ ಸ್ಯಾಂಟೋ 40(32) ರನ್‌ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಂಡು ಬರಲಿಲ್ಲ. ಉಳಿದಂತೆ ಹೃದಯ್‌ 4(6) ರನ್‌, ಶಕೀಬ್‌ ಅಲ್-ಹಸನ್‌ 11(7) ರನ್‌, ಮಹ್ಮದುಲ್ಲಾ 13(15)ರನ್‌, ಜಾಕೇರ್‌ ಅಲಿ 1(4) ರನ್‌, ರಶೀದದ ಹೊಸೇನ್‌ 24(10) ರನ್‌, ಮೆಹದಿ ಹಸನ್‌ ಹಾಗೂ ತಂಝೀಮ್‌ ಹಸನ್‌ ಔಟಾಗದೇ ತಲಾ 5 ಹಾಗೂ ಒಂದು ರನ್‌ ಕಲೆ ಹಾಕಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

ಟೀಂ ಇಂಡಿಯಾ ಪರ ಕುಲ್ದಿಪ್‌ ಯಾದವ್‌ 3, ಅರ್ಷ್‌ದೀಪ್‌ ಹಾಗೂ ಬುಮ್ರಾ ತಲಾ ಎರಡು ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

17 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

23 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago