ಕ್ರೀಡೆ

ICC t20 worldcup 2024: ಬಾಂಗ್ಲಾದೇಶವನ್ನು ಬಗ್ಗುಬಡಿದ ಭಾರತ; ಸೆಮಿಸ್‌ ಆಸೆ ಜೀವಂತ

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 196 ರನ್‌ ಕೆಲಹಾಕಿ ಎದುರಾಳಿ ತಂಡಕ್ಕೆ 197 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ ಕುಲ್ದೀಪ್‌ ಯಾದವ್‌ ಸ್ಪಿನ್‌ ಮೋಡಿಗೆ ಬಲಿಯಾಗುವ ಮೂಲಕ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿ 50 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಭಾರತ ಇನ್ನಿಂಗ್ಸ್‌: ಸೂಪರ್‌-8ರ ಗ್ರೂಪ್‌ ಹಂತದ ಮಹತ್ವದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಕ್ಕಿತು. ನಾಯಕ ರೋಹಿತ್‌ ಶರ್ಮಾ 23(11)ರನ್‌, ವಿರಾಟ್‌ ಕೊಹ್ಲಿ 37(28)ರನ್‌ ಗಳಿಸಿ ಔಟಾದರು. ಬಳಿಕ ಬಂದ ರಿಷಭ್‌ ಪಂತ್‌ 36(24)ರನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ 6(2)ರನ್‌ ಕಲೆಹಾಕಿ ಬೇಗನೆ ನಿರ್ಗಮಿಸಿದರು.

ತಂಡ ಸಂಕಷ್ಟದಲ್ಲಿದ್ದಾಗ ಶಿವಂ ದುಬೆ ಹಾಗೂ ಉಪ ನಾಯಕ ಹಾರ್ದಿಕ್‌ ಪಾಂಡ್ಯ ಜೊತೆಯಾಗಿ ಚೇತರಿಕೆಯ ಇನ್ನಿಂಗ್ಸ್‌ ಕಟ್ಟಿದರು. ಶಿವಂ ದುಬೆ 34(24)ರನ್‌ ಗಳಿಸಿದರೆ, ಹಾರ್ದಿಕ್‌ ಪಾಂಡ್ಯ ಔಟಾಗದೇ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 50 ರನ್‌ ಗಳಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 3(5) ರನ್‌ ಗಳಿಸಿದರು.

ಬಾಂಗ್ಲಾದೇಶದ ಪರ ಹಸನ್‌ ಶಕೀಬ್‌ ಹಾಗೂ ರಿಷಾದ್‌ ಹೊಸೇನ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು. ಶಕೀಬ್‌ ಅಲ್‌-ಹಸನ್‌ ಒಂದು ವಿಕೆಟ್‌ ಪಡೆದರು.

ಬಾಂಗ್ಲಾದೇಶ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಆರಂಭಿಕ ಆಘಾತ ಎದುರಾಯಿತು. ಲಿಟನ್‌ ದಾಸ್‌ 13(10)ರನ್‌ ಗಳಿಸಿ ಬೇಗನೇ ಔಟಾದರು. ತಂಝೀದ್ ಹಸನ್‌ 29(31) ಮಂದಗತಿಯ ಆಟವಾಡಿ ನಿರ್ಗಮಿಸಿದರು.

ನಾಯಕ ನಜ್ಮುಲ್ ಹುಸೇನ್ ಸ್ಯಾಂಟೋ 40(32) ರನ್‌ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಂಡು ಬರಲಿಲ್ಲ. ಉಳಿದಂತೆ ಹೃದಯ್‌ 4(6) ರನ್‌, ಶಕೀಬ್‌ ಅಲ್-ಹಸನ್‌ 11(7) ರನ್‌, ಮಹ್ಮದುಲ್ಲಾ 13(15)ರನ್‌, ಜಾಕೇರ್‌ ಅಲಿ 1(4) ರನ್‌, ರಶೀದದ ಹೊಸೇನ್‌ 24(10) ರನ್‌, ಮೆಹದಿ ಹಸನ್‌ ಹಾಗೂ ತಂಝೀಮ್‌ ಹಸನ್‌ ಔಟಾಗದೇ ತಲಾ 5 ಹಾಗೂ ಒಂದು ರನ್‌ ಕಲೆ ಹಾಕಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

ಟೀಂ ಇಂಡಿಯಾ ಪರ ಕುಲ್ದಿಪ್‌ ಯಾದವ್‌ 3, ಅರ್ಷ್‌ದೀಪ್‌ ಹಾಗೂ ಬುಮ್ರಾ ತಲಾ ಎರಡು ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

16 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

16 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago