ಕ್ರೀಡೆ

ICC t20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಶಿವಂ ದುಬೆ, ಸಂಜುಗೆ ಸ್ಥಾನ!

ನವದೆಹಲಿ: ಇದೇ ಜೂನ್‌ ಒಂದರಿಂದ ಆರಂಭವಾಗಲಿರುವ ICC t20 worldcup ಟೂರ್ನಿಗೆ  ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಈ ಬಾರಿ ಅಚ್ಚರಿಯಂಬಂತೆ ಸಂಜು ಸ್ಯಾಮ್ಸನ್‌ ಹಾಗೂ ಸಿಎಸ್‌ಕೆ ತಡದ ಬಿಗ್‌ ಹಿಟ್ಟರ್‌ ಶಿವಂ ದುಬೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಈ ಟೂರ್ನಿಗೂ ಕೂಡಾ ರೋಹಿತ್‌ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಉಪ ನಾಯಕನಾಗಿ ಹಾರ್ದಿಕ್‌ ಪಾಂಡ್ಯ ನೇಮಕಗೊಂಡಿದ್ದಾರೆ. ಅಪಘಾತದಿಂದ ಹೊರಬಂದಿರುವ ವಿಕೇಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಆದರೆ ಕನ್ನಡಿಕ ಕೆ.ಎಲ್‌ ರಾಹುಲ್‌ ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ತಂಡದ ಸಾರಥ್ಯ ರೋಹಿತ್‌ ಶರ್ಮಾ ವಹಿಸಿದರೇ, ಇವರಿಗೆ ಜೊತೆಯಾಗಿ ಕನ್ನಡಿಗ ರಾಹುಲ್‌ ದ್ರಾವಿಡ್‌ ಹೆಡ್‌ ಕೋಚ್‌ ಆಗಿ ಇರಲಿದ್ದಾರೆ. ಕೋಚ್‌ ದ್ರಾವಿಡ್‌ ಹಾಗೂ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿ ಬಳಿಕ ತಂಡವನ್ನು ಅಂತಿಮಗೊಳಿಸಿದ್ದಾರೆ.

ಟೀ ಇಂಡಿಯಾ ತಂಡಕ್ಕೆ ಯಜುವೇಂದರ್‌ ಚಾಹಲ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ವಿಶ್ವಕಪ್‌ ನಂತರ ಯಾವುದೇ ಪಂದ್ಯಗಳನ್ನು ಆಡದ ಮೊಹಮದ್‌ ಶಮಿ ವಿಶ್ವಕಪ್‌ ಟೂರ್ನಿಗೂ ಅಲಭ್ಯರಾಗಿದ್ದಾರೆ.

ಒಟ್ಟು ಹದಿನೈದು ಆಟಗಾರರನ್ನೊಳಗೊಂಡ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿಗಳಿಗಿಂತ ಯುವಕರಿಗೆ ಹೆಚ್ಚಿನ ಮಣೆ ಹಾಕಲಾಗಿದೆ.

ಟೀಂ ಇಂಡಿಯಾ ತಂಡ ಇಂತಿದೆ: ರೋಹಿತ್‌ ಶರ್ಮಾ (ನಾಯಕ), ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಷಭ್‌ ಪಂತ್‌ (ವಿ.ಕೀ), ಶಿವಂ ದುಬೆ, ಸಂಜು ಸ್ಯಾಮ್ಸನ್‌ (ವಿ.ಕೀ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಅರ್ಷ್‌ದೀಪ್‌ ಸಿಂಗ್‌, ಕುಲ್ದೀಪ್‌ ಯಾದವ್‌, ಯಜುವೇಂದರ್‌ ಚಾಹಲ್‌, ಅಕ್ಷರ್‌ ಪಟೇಲ್‌, ಮೊಹಮದ್‌ ಸಿರಾಜ್‌

https://x.com/BCCI/status/1785250931166060585

ಬೆಂಚ್‌: ಶುಭ್‌ಮನ್‌ ಗಿಲ್‌, ರಿಂಕು ಸಿಂಗ್‌, ಖಲೀಲ್‌ ಅಹ್ಮದ್‌, ಆವೇಶ್‌ ಖಾನ್‌

ICC t20 ವಿಶ್ವಕಪ್‌ ಇದೇ ಜೂನ್‌ 1 ರಿಂದ ಆರಂಭವಾಗಲಿದ್ದು, ಈ ಟೂರ್ನಿ ಇದೇ ಜೂನ್‌ 29 ರಂದು ಅಂತ್ಯವಾಗಲಿದೆ. ಇನ್ನು ಟೀಂ ಇಂಡಿಯಾ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ ಪಂದ್ಯವಾಡುವ ಮೂಲಕ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ.

2013 ರಿಂದ ಆಚೆಗೆ ಟೀಂ ಇಂಡಿಯಾ ಈವರೆಗೆ ಯಾವುದೇ ಕಪ್‌ ಗೆದ್ದಿಲ್ಲ. 2023 ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ಪಂದ್ಯದಲ್ಲಿ ಆಸೀಸ್‌ ವಿರುದ್ಧ ತವರಿನಂಗಳದಲ್ಲಿ ಸೋತು ಮುಖಭಂಗ ಅನುಭವಿಸಿತ್ತು. ಈ ವಿಶ್ವಕಪ್‌ ಗೆದ್ದು, ಟ್ರೋಫಿ ಬರ ನೀಗಿಸಲಿದೆಯಾ ಟೀಂ ಇಂಡಿಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

11 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

27 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

44 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

57 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

10 hours ago