ಕ್ರೀಡೆ

ICC T20 worldcup: ಟೀಂ ಇಂಡಿಯಾ ವೇಳಾಪಟ್ಟಿ; ಈ ದಿನದಂದು ಪಾಕ್‌ ವಿರುದ್ಧ ಕಾದಾಟ

ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌ 2ರಿಂದ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಈ ಬಾರಿಯ ವಿಶ್ವಕಪಪ್‌ನಲ್ಲಿ 20 ತಂಡಗಳು ಅಖಾಡಕ್ಕಿಳಿದಿವೆ.

20 ತಂಡಗಳ ಪೈಕಿ 4 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜೂನ್‌ 9ರಂದು ಸಾಂಪ್ರಾದಾಯಿಕ ವೈರಿಗಳ ಕಾದಾಟ ನಡೆಯಲಿದೆ.

ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಜೂನ್‌ 5ರಿಂದ ಆರಂಭಿಸಲಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಎದುರಿಸಲಿರುವ ತಂಡಗಳಾವುವು, ಸ್ಥಳ, ದಿನಾಂಕ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಟೀಂ ಇಂಡಿಯಾ ಐರ್ಲೆಂಡ್‌ ವಿರುದ್ಧ ತನ್ನ ಮೊದಲ ಪಂದ್ಯ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.

ವೇಳಾಪಟ್ಟಿ ಇಂತಿದೆ.

ಮೊದಲ ಪಂದ್ಯ: ಜೂನ್‌. 5- ಟೀಂ ಇಂಡಿಯಾ vs ಐರ್ಲೆಂಡ್‌
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.

ಎರಡನೇ ಪಂದ್ಯ: ಜೂನ್‌.9- ಟೀಂ ಇಂಡಿಯಾ vs ಪಾಕಿಸ್ತಾನ್‌
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.

ಮೂರನೇ ಪಂದ್ಯ: ಜೂನ್‌. 12- ಟೀಂ ಇಂಡಿಯಾ vs ಯುಎಸ್‌ಎ
ಸ್ಥಳ: ನ್ಯೂಯಾರ್ಕ್‌ನ ನಸ್ಸೌ ಕ್ರೀಡಾಂಗಣ.

ನಾಲ್ಕನೇ ಪಂದ್ಯ: ಜೂನ್‌. 15- ಟೀಂ ಇಂಡಿಯಾ vs ಕೆನಡಾ
ಸ್ಥಳ: ಲಾಡರ್ಹಿಲ್‌ ನ ಸೆಂಟ್ರಲ್‌ ಬ್ರೋವರ್ಡ್‌ ಪಾರ್ಕ್‌ ಕ್ರೀಡಾಂಗಣ

ನಾಕ್‌ಔಟ್‌ ಹಾಗೂ ಸೆಮಿ ಫೈನಲ್‌ ಹಾದಿ ಹೀಗಿದೆ: ಈ ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು, ಅವುಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕು ಗುಂಪುಗಳಲ್ಲಿ ಮೊದಲೆರೆಡು ಸ್ಥಾನ ಪಡೆವ ಎರಡು ತಂಡಗಳು ಸೂಪರ್‌-8 ಹಂತಕ್ಕೆ ತಲುಪಲಿವೆ. ಅಲ್ಲಿಂದ ಗೆದ್ದ ತಂಡಗಳು ಸೆಮಿಸ್‌ಗೆ ಅರ್ಹತೆ ಪಡೆಯಲಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

21 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago