ವೆಸ್ಟ್ ಇಂಡೀಸ್, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ಗೆ ಪಾಕಿಸ್ತಾನ್ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಕದನ ಜೂನ್.9 ರಂದು ನ್ಯೂಯಾರ್ಕ್ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಳೆದ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ಈ ಬಾರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಖಾಡಕ್ಕೆ ಇಳಿದಿದೆ. ಈ ಬಾರಿಯೂ ಪಾಕ್ಗೆ ಬಾಬರ ಅಜಂ ಸಾರಥ್ಯ ವಹಿಸಲಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಹಸನ್ ಅಲಿಗೆ ಟಿಕೆಟ್ ಕೈ ತಪ್ಪಿದರೇ ಅವರ ಬದಲಾಗಿ ಹ್ಯಾರಿಸ್ ರೌಫ್ ಅವರಿಗೆ ಪಾಕ್ ಕ್ರಿಕೆಟ್ ಮಂಡಳಿ ಮಣೆ ಹಾಕಿದೆ.
ಅಚ್ಚರಿಯಂಬತೆ ಈ ಟಿ20 ವಿಶ್ವಕಪ್ಗೆ ಪಾಕ್ನ ವೇಗಿ ಮೊಹಮ್ಮದ್ ಅಮೀರ್ ಅವರು ಕಂಬ್ಯಾಕ್ ಮಾಡಿದ್ದಾರೆ. ಇವರು ನಾಲ್ಕು ವರ್ಷಗಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಹಾಗಯೇ ಇನ್ನೊಬ್ಬ ಆಲ್ರೌಂಡ್ ಇಮಾದ್ ವಾಸಿಂ ಕೂಡಾ ಕಳೆದ ವರ್ಷ ನಿವೃತ್ತಿ ಘೋಷಿಸಿದ್ದರು. ಅವರನ್ನು ಸಹಾ ತಂಡಕ್ಕೆ ವಾಪಸ್ ಕರೆಸಲಾಗಿದೆ.
ಮತ್ತು ತಂಡದಲ್ಲಿ ಯುವ ಆಟಗಾರರಾದ ಉಸ್ಮಾನ್ ಖಾನ್, ಮಧ್ಯಮ ಕ್ರಮಾಂಕದ ಬ್ಯಾಟರ್ ಮಹಮ್ಮದ್ ಇರ್ಫಾನ್ ಖಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿ ಹೇಗಾದರೂ ಮಾಡಿ ಟೀಂ ಇಂಡಿಯಾವನ್ನು ಮಣಿಸಬೇಕು ಎಂಬ ಛಲದೊಂದಿಗೆ ಪಾಕ್ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ವಿಶ್ವಕಪ್ಗೆ ಕಳುಹಿಸಿದ್ದಾರೆ. ಟಿ20 ವಿಶ್ವಕಪ್ನ ಪಾಕ್-ಇಂಡಿಯಾ ಪಂದ್ಯ ಮಹತ್ವ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.
ಪಾಕ್ ಪ್ಲೇಯಿಂಗ್ 15 ಈ ಕೆಳಕಂಡಂತಿದೆ.
ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್(ವಿ.ಕೀ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ನಸೀಮ್ ಶಾ, ಸೈಮ್ ಆಯೂಬ್, ಶದಾಬ್ ಖಾನ್, ಶಾಹಿನ್ ಶಾ ಅಫ್ರಿದಿ, ಉಸ್ಮಾನ್ ಖಾನ್
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…