ಕ್ರೀಡೆ

ICC t20 worldcup: ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಸಿದ್ದ; ಈ ಬಾರಿಯೂ ಬಾಬರ್‌ಗೆ ಸಾರಥ್ಯ?

ವೆಸ್ಟ್‌ ಇಂಡೀಸ್‌, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್‌ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಕದನ ಜೂನ್‌.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಳೆದ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ಈ ಬಾರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಖಾಡಕ್ಕೆ ಇಳಿದಿದೆ. ಈ ಬಾರಿಯೂ ಪಾಕ್‌ಗೆ ಬಾಬರ ಅಜಂ ಸಾರಥ್ಯ ವಹಿಸಲಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಹಸನ್‌ ಅಲಿಗೆ ಟಿಕೆಟ್‌ ಕೈ ತಪ್ಪಿದರೇ ಅವರ ಬದಲಾಗಿ ಹ್ಯಾರಿಸ್‌ ರೌಫ್‌ ಅವರಿಗೆ ಪಾಕ್‌ ಕ್ರಿಕೆಟ್‌ ಮಂಡಳಿ ಮಣೆ ಹಾಕಿದೆ.

ಅಚ್ಚರಿಯಂಬತೆ ಈ ಟಿ20 ವಿಶ್ವಕಪ್‌ಗೆ ಪಾಕ್‌ನ ವೇಗಿ ಮೊಹಮ್ಮದ್‌ ಅಮೀರ್‌ ಅವರು ಕಂಬ್ಯಾಕ್‌ ಮಾಡಿದ್ದಾರೆ. ಇವರು ನಾಲ್ಕು ವರ್ಷಗಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಹಾಗಯೇ ಇನ್ನೊಬ್ಬ ಆಲ್‌ರೌಂಡ್‌ ಇಮಾದ್‌ ವಾಸಿಂ ಕೂಡಾ ಕಳೆದ ವರ್ಷ ನಿವೃತ್ತಿ ಘೋಷಿಸಿದ್ದರು. ಅವರನ್ನು ಸಹಾ ತಂಡಕ್ಕೆ ವಾಪಸ್‌ ಕರೆಸಲಾಗಿದೆ.

ಮತ್ತು ತಂಡದಲ್ಲಿ ಯುವ ಆಟಗಾರರಾದ ಉಸ್ಮಾನ್‌ ಖಾನ್‌, ಮಧ್ಯಮ ಕ್ರಮಾಂಕದ ಬ್ಯಾಟರ್‌ ಮಹಮ್ಮದ್‌ ಇರ್ಫಾನ್‌ ಖಾನ್‌ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿ ಹೇಗಾದರೂ ಮಾಡಿ ಟೀಂ ಇಂಡಿಯಾವನ್ನು ಮಣಿಸಬೇಕು ಎಂಬ ಛಲದೊಂದಿಗೆ ಪಾಕ್‌ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ವಿಶ್ವಕಪ್‌ಗೆ ಕಳುಹಿಸಿದ್ದಾರೆ. ಟಿ20 ವಿಶ್ವಕಪ್‌ನ ಪಾಕ್‌-ಇಂಡಿಯಾ ಪಂದ್ಯ ಮಹತ್ವ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.

ಪಾಕ್‌ ಪ್ಲೇಯಿಂಗ್‌ 15 ಈ ಕೆಳಕಂಡಂತಿದೆ.

ಬಾಬರ್‌ ಅಜಂ (ನಾಯಕ), ಮೊಹಮ್ಮದ್‌ ರಿಜ್ವಾನ್‌(ವಿ.ಕೀ), ಅಬ್ರಾರ್‌ ಅಹ್ಮದ್‌, ಆಝಂ ಖಾನ್‌, ಫಖರ್‌ ಜಮಾನ್‌, ಹ್ಯಾರಿಸ್‌ ರೌಫ್‌, ಇಫ್ತಿಕರ್‌ ಅಹ್ಮದ್‌, ಇಮಾದ್‌ ವಾಸಿಂ, ಅಬ್ಬಾಸ್‌ ಅಫ್ರಿದಿ, ಮೊಹಮ್ಮದ್‌ ಅಮೀರ್‌, ನಸೀಮ್‌ ಶಾ, ಸೈಮ್‌ ಆಯೂಬ್‌, ಶದಾಬ್‌ ಖಾನ್‌, ಶಾಹಿನ್‌ ಶಾ ಅಫ್ರಿದಿ, ಉಸ್ಮಾನ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

3 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

24 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago