ಕ್ರೀಡೆ

ICC t20 worldcup: ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಸಿದ್ದ; ಈ ಬಾರಿಯೂ ಬಾಬರ್‌ಗೆ ಸಾರಥ್ಯ?

ವೆಸ್ಟ್‌ ಇಂಡೀಸ್‌, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್‌ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಕದನ ಜೂನ್‌.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಳೆದ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ಈ ಬಾರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಖಾಡಕ್ಕೆ ಇಳಿದಿದೆ. ಈ ಬಾರಿಯೂ ಪಾಕ್‌ಗೆ ಬಾಬರ ಅಜಂ ಸಾರಥ್ಯ ವಹಿಸಲಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಹಸನ್‌ ಅಲಿಗೆ ಟಿಕೆಟ್‌ ಕೈ ತಪ್ಪಿದರೇ ಅವರ ಬದಲಾಗಿ ಹ್ಯಾರಿಸ್‌ ರೌಫ್‌ ಅವರಿಗೆ ಪಾಕ್‌ ಕ್ರಿಕೆಟ್‌ ಮಂಡಳಿ ಮಣೆ ಹಾಕಿದೆ.

ಅಚ್ಚರಿಯಂಬತೆ ಈ ಟಿ20 ವಿಶ್ವಕಪ್‌ಗೆ ಪಾಕ್‌ನ ವೇಗಿ ಮೊಹಮ್ಮದ್‌ ಅಮೀರ್‌ ಅವರು ಕಂಬ್ಯಾಕ್‌ ಮಾಡಿದ್ದಾರೆ. ಇವರು ನಾಲ್ಕು ವರ್ಷಗಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಹಾಗಯೇ ಇನ್ನೊಬ್ಬ ಆಲ್‌ರೌಂಡ್‌ ಇಮಾದ್‌ ವಾಸಿಂ ಕೂಡಾ ಕಳೆದ ವರ್ಷ ನಿವೃತ್ತಿ ಘೋಷಿಸಿದ್ದರು. ಅವರನ್ನು ಸಹಾ ತಂಡಕ್ಕೆ ವಾಪಸ್‌ ಕರೆಸಲಾಗಿದೆ.

ಮತ್ತು ತಂಡದಲ್ಲಿ ಯುವ ಆಟಗಾರರಾದ ಉಸ್ಮಾನ್‌ ಖಾನ್‌, ಮಧ್ಯಮ ಕ್ರಮಾಂಕದ ಬ್ಯಾಟರ್‌ ಮಹಮ್ಮದ್‌ ಇರ್ಫಾನ್‌ ಖಾನ್‌ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿ ಹೇಗಾದರೂ ಮಾಡಿ ಟೀಂ ಇಂಡಿಯಾವನ್ನು ಮಣಿಸಬೇಕು ಎಂಬ ಛಲದೊಂದಿಗೆ ಪಾಕ್‌ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ವಿಶ್ವಕಪ್‌ಗೆ ಕಳುಹಿಸಿದ್ದಾರೆ. ಟಿ20 ವಿಶ್ವಕಪ್‌ನ ಪಾಕ್‌-ಇಂಡಿಯಾ ಪಂದ್ಯ ಮಹತ್ವ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.

ಪಾಕ್‌ ಪ್ಲೇಯಿಂಗ್‌ 15 ಈ ಕೆಳಕಂಡಂತಿದೆ.

ಬಾಬರ್‌ ಅಜಂ (ನಾಯಕ), ಮೊಹಮ್ಮದ್‌ ರಿಜ್ವಾನ್‌(ವಿ.ಕೀ), ಅಬ್ರಾರ್‌ ಅಹ್ಮದ್‌, ಆಝಂ ಖಾನ್‌, ಫಖರ್‌ ಜಮಾನ್‌, ಹ್ಯಾರಿಸ್‌ ರೌಫ್‌, ಇಫ್ತಿಕರ್‌ ಅಹ್ಮದ್‌, ಇಮಾದ್‌ ವಾಸಿಂ, ಅಬ್ಬಾಸ್‌ ಅಫ್ರಿದಿ, ಮೊಹಮ್ಮದ್‌ ಅಮೀರ್‌, ನಸೀಮ್‌ ಶಾ, ಸೈಮ್‌ ಆಯೂಬ್‌, ಶದಾಬ್‌ ಖಾನ್‌, ಶಾಹಿನ್‌ ಶಾ ಅಫ್ರಿದಿ, ಉಸ್ಮಾನ್‌ ಖಾನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago