ಕ್ರೀಡೆ

ICC t20 worldcup: ವೆಸ್ಟ್‌ ಇಂಡೀಸ್‌ ತಂಡ ಪ್ರಕಟ; ಆರ್‌ಸಿಬಿ ಆಟಗಾರನಿಗೆ ಉಪನಾಯಕನ ಪಟ್ಟ?

ವೆಸ್ಟ್‌ಇಂಡೀಸ್‌: ಇದೇ ಜೂನ್‌.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.

ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ರೋಮನ್‌ ಪೊವೆಲ್‌ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್‌ಸಿಬಿ ಆಟಗಾರ ಅಲ್ಜಾರಿ ಜೋಸೆಫ್‌ ಅವರು ನೇಮಕಗೊಂಡಿದ್ದಾರೆ.

ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್‌ ಆಲ್‌ರೌಂಡರ್‌ ಜಾಸನ್‌ ಹೋಲ್ಡರ್‌ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್‌ ಮೆಕಾಯ್‌ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್‌, ಚಾರ್ಲ್ಸ್‌, ಪೂರನ್‌, ಹೆಟ್ಮಾಯರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೆಸ್ಟ್‌ ಇಂಡೀಸ್‌ ತಂಡ ಹೀಗಿದೆ: ರೋಮನ್‌ ಪೋವೆಲ್‌(ನಾಯಕ), ಅಲ್ಜಾರಿ ಜೋಸೆಫ್‌(ಉಪ ನಾಯಕ), ಶಾಯ್‌ ಹೋಪ್‌(ವಿ.ಕೀ), ಜಾನ್ಸನ್‌ ಚಾರ್ಲ್ಸ್‌, ರಾಸ್ಟನ್‌ ಚೇಸ್‌, ಬ್ರೆಂಡನ್‌ ಕಿಂಗ್‌, ನಿಕೋಲಸ್‌ ಪೂರನ್‌(ವಿ.ಕೀ), ಶಿಮ್ರಾನ್‌ ಹೆಟ್ಮಾಯರ್‌, ಅಕೀಲ್‌ ಹುಸೇನ್‌, ಶಮರ್‌ ಜೋಸೆಫ್‌, ಒಬೆದ್‌ ಮೆಕಾಯ್‌, ಗುಡಕೇಶ್‌ ಮೋತಿ, ಶೆರ್ಪೆನ್‌ ರುಡರ್‌ಫೋರ್ಡ್‌, ರೊಮ್ಯಾರಿಯೋ ಶೆಫರ್ಡ್‌.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago