ಕ್ರೀಡೆ

ICC t20 worldcup: ವೆಸ್ಟ್‌ ಇಂಡೀಸ್‌ ತಂಡ ಪ್ರಕಟ; ಆರ್‌ಸಿಬಿ ಆಟಗಾರನಿಗೆ ಉಪನಾಯಕನ ಪಟ್ಟ?

ವೆಸ್ಟ್‌ಇಂಡೀಸ್‌: ಇದೇ ಜೂನ್‌.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.

ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ರೋಮನ್‌ ಪೊವೆಲ್‌ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್‌ಸಿಬಿ ಆಟಗಾರ ಅಲ್ಜಾರಿ ಜೋಸೆಫ್‌ ಅವರು ನೇಮಕಗೊಂಡಿದ್ದಾರೆ.

ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್‌ ಆಲ್‌ರೌಂಡರ್‌ ಜಾಸನ್‌ ಹೋಲ್ಡರ್‌ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್‌ ಮೆಕಾಯ್‌ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್‌, ಚಾರ್ಲ್ಸ್‌, ಪೂರನ್‌, ಹೆಟ್ಮಾಯರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೆಸ್ಟ್‌ ಇಂಡೀಸ್‌ ತಂಡ ಹೀಗಿದೆ: ರೋಮನ್‌ ಪೋವೆಲ್‌(ನಾಯಕ), ಅಲ್ಜಾರಿ ಜೋಸೆಫ್‌(ಉಪ ನಾಯಕ), ಶಾಯ್‌ ಹೋಪ್‌(ವಿ.ಕೀ), ಜಾನ್ಸನ್‌ ಚಾರ್ಲ್ಸ್‌, ರಾಸ್ಟನ್‌ ಚೇಸ್‌, ಬ್ರೆಂಡನ್‌ ಕಿಂಗ್‌, ನಿಕೋಲಸ್‌ ಪೂರನ್‌(ವಿ.ಕೀ), ಶಿಮ್ರಾನ್‌ ಹೆಟ್ಮಾಯರ್‌, ಅಕೀಲ್‌ ಹುಸೇನ್‌, ಶಮರ್‌ ಜೋಸೆಫ್‌, ಒಬೆದ್‌ ಮೆಕಾಯ್‌, ಗುಡಕೇಶ್‌ ಮೋತಿ, ಶೆರ್ಪೆನ್‌ ರುಡರ್‌ಫೋರ್ಡ್‌, ರೊಮ್ಯಾರಿಯೋ ಶೆಫರ್ಡ್‌.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

2 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

3 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

3 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

5 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

5 hours ago