ವೆಸ್ಟ್ಇಂಡೀಸ್: ಇದೇ ಜೂನ್.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ರೋಮನ್ ಪೊವೆಲ್ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್ಸಿಬಿ ಆಟಗಾರ ಅಲ್ಜಾರಿ ಜೋಸೆಫ್ ಅವರು ನೇಮಕಗೊಂಡಿದ್ದಾರೆ.
ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್ ಆಲ್ರೌಂಡರ್ ಜಾಸನ್ ಹೋಲ್ಡರ್ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್ ಮೆಕಾಯ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್, ಚಾರ್ಲ್ಸ್, ಪೂರನ್, ಹೆಟ್ಮಾಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋಮನ್ ಪೋವೆಲ್(ನಾಯಕ), ಅಲ್ಜಾರಿ ಜೋಸೆಫ್(ಉಪ ನಾಯಕ), ಶಾಯ್ ಹೋಪ್(ವಿ.ಕೀ), ಜಾನ್ಸನ್ ಚಾರ್ಲ್ಸ್, ರಾಸ್ಟನ್ ಚೇಸ್, ಬ್ರೆಂಡನ್ ಕಿಂಗ್, ನಿಕೋಲಸ್ ಪೂರನ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಅಕೀಲ್ ಹುಸೇನ್, ಶಮರ್ ಜೋಸೆಫ್, ಒಬೆದ್ ಮೆಕಾಯ್, ಗುಡಕೇಶ್ ಮೋತಿ, ಶೆರ್ಪೆನ್ ರುಡರ್ಫೋರ್ಡ್, ರೊಮ್ಯಾರಿಯೋ ಶೆಫರ್ಡ್.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…