ವೆಸ್ಟ್ಇಂಡೀಸ್: ಇದೇ ಜೂನ್.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ರೋಮನ್ ಪೊವೆಲ್ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್ಸಿಬಿ ಆಟಗಾರ ಅಲ್ಜಾರಿ ಜೋಸೆಫ್ ಅವರು ನೇಮಕಗೊಂಡಿದ್ದಾರೆ.
ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್ ಆಲ್ರೌಂಡರ್ ಜಾಸನ್ ಹೋಲ್ಡರ್ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್ ಮೆಕಾಯ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್, ಚಾರ್ಲ್ಸ್, ಪೂರನ್, ಹೆಟ್ಮಾಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋಮನ್ ಪೋವೆಲ್(ನಾಯಕ), ಅಲ್ಜಾರಿ ಜೋಸೆಫ್(ಉಪ ನಾಯಕ), ಶಾಯ್ ಹೋಪ್(ವಿ.ಕೀ), ಜಾನ್ಸನ್ ಚಾರ್ಲ್ಸ್, ರಾಸ್ಟನ್ ಚೇಸ್, ಬ್ರೆಂಡನ್ ಕಿಂಗ್, ನಿಕೋಲಸ್ ಪೂರನ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಅಕೀಲ್ ಹುಸೇನ್, ಶಮರ್ ಜೋಸೆಫ್, ಒಬೆದ್ ಮೆಕಾಯ್, ಗುಡಕೇಶ್ ಮೋತಿ, ಶೆರ್ಪೆನ್ ರುಡರ್ಫೋರ್ಡ್, ರೊಮ್ಯಾರಿಯೋ ಶೆಫರ್ಡ್.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…