ಬೆಂಗಳೂರು: ದೀರ್ಘ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಬ್ಯಾಟರ್ಸ್ ಶ್ರೇಯಾಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಉಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟ್ಸ್ಮನ್ ಮಾರ್ನಸ್ ಲಾಬುಶೇನ್ ಅವರನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಸಡ್ಡು ಹೊಡೆದಿದ್ದಾರೆ. 2023ರ ಸಾಲಿನ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಮನಮೋಹಕ ಶತಕ ಬಾರಿಸಿದ ಕ್ಲಾಸಿಕ್ ಬ್ಯಾಟರ್ ಜೋ ರೂಟ್, ಈಗ ನೂತನ ನಂ.1 ಬ್ಯಾಟ್ಸ್ಮನ್ ಅಗಿ ಹೊರಹೊಮ್ಮಿದ್ದಾರೆ. ಬರೋಬ್ಬರಿ 6 ತಿಂಗಳ ಬಳಿಕ ಮಾರ್ನಸ್ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.
ಎಡ್ಜ್ಬಾಸ್ಟನ್ ಅಂಗಣದಲ್ಲಿ ನಡೆದ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಅಜೇಯ 118 ರನ್ ಬಾರಿಸಿದ್ದ ಜೋ ರೂಟ್, ಎರಡನೇ ಇನಿಂಗ್ಸ್ನಲ್ಲೂ 46 ರನ್ಗಳ ಕೊಡುಗೆ ಕೊಟ್ಟರು. ಅವರ ಈ ಪ್ರದರ್ಶನದ ಬಲದಿಂದ ಶ್ರೇಯಾಂಕ ಪಟ್ಟಿಯಲ್ಲಿ 887 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಪಂದ್ಯದಲ್ಲಿ ಇಂಗ್ಲೆಂಡ್ 2 ವಿಕೆಟ್ಗಳ ವೀರೋಚಿತ ಸೋಲುಂಡಿತು.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಮಾರ್ನಸ್ ಲಾಬುಶೇನ್, ಪ್ರಥಮ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಡಕ್ಔಟ್ ಆದರೆ, ಎರಡನೇ ಇನಿಂಗ್ಸ್ನಲ್ಲಿ 13 ರನ್ ಗಳಿಸಿ ಔಟಾದರು. ಪರಿಣಾಮ ಶ್ರೇಯಾಂಕ ಪಟ್ಟಿಯುಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ 2ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.
ಆಸೀಸ್ ಪರ ಮೊದಲ ಇನಿಂಗ್ಸ್ನಲ್ಲಿ ಫಿಫ್ಟಿ ಬಾರಿಸಿದರೂ ಎಡಗೈ ಬ್ಯಾಟರ್ ಟ್ರಾವಿಸ್ ಹೆಡ್ 4ನೇ ಶ್ರೇಯಾಂಕಕ್ಕೆ ಜಾರಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಮ್ 5ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, 16 ಮತ್ತು 6 ರನ್ ಗಳಿಸಿದ ಪರಿಣಾಮ ಶ್ರೇಯಾಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಾರಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟರ್ಸ್ ಶ್ರೇಯಾಂಕ ಪಟ್ಟಿ (ಜೂನ್ 21, 2023)
01. ಜೋ ರೂಟ್ (ಇಂಗ್ಲೆಂಡ್) – 887 ಅಂಕಗಳು
02. ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್) – 883
03. ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ) – 877
04. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ) – 873
05. ಬಾಬರ್ ಆಜಮ್ (ಪಾಕಿಸ್ತಾನ) – 862
06. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ) – 861
07. ಉಸ್ಮಾನ್ ಖವಾಜಾ (ಆಸ್ಟ್ರೇಲಿಯಾ) – 836
08. ಡ್ಯಾರಿಲ್ ಮಿಚೆಲ್ (ನ್ಯೂಜಿಲೆಂಡ್) – 792
09. ದಿಮುತ್ ಕರುಣಾರತ್ನೆ (ಶ್ರೀಲಂಕಾ) – 780
10. ರಿಷಭ್ ಪಂತ್ (ಭಾರತ) – 758
ಇನ್ನು ಟೆಸ್ಟ್ ಶ್ರೇಯಾಂಕದ ಅಗ್ರ 10ರಲ್ಲಿ ಭಾರತ ತಂಡದ ಏಕಮಾತ್ರ ಬ್ಯಾಟರ್ ಆಗಿ ರಿಷಭ್ ಪಂತ್ ಉಳಿದುಕೊಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್ 29ರಂದು ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡು ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ವಿಕೆಟ್ಕೀಪರ್ ಬ್ಯಾಟ್ಸ್ಮನ್ ಕಮ್ಬ್ಯಾಕ್ ಮಾಡಲು ಕನಿಷ್ಠ ಒಂದು ವರ್ಷ ಸಮಯವಾದರೂ ಬೇಕು. ವಿರಾಟ್ ಕೊಹ್ಲಿ 14ನೇ ಶ್ರೇಯಾಂಕದಲ್ಲಿದ್ದಾರೆ.
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…