ಕ್ರೀಡೆ

ಐಸಿಸಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ 2025 ಟೂರ್ನಿ ಇಂದಿನಿಂದ ಆರಂಭ

 

ಕೌಲಾಲಂಪುರ್:‌ 19 ವರ್ಷದೊಳಗಿನ ಮಹಿಳಾ ಟಿ20‌ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಉದಯೋನ್ಮುಖ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾತರರಾಗಿದ್ದಾರೆ.

2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗಿತ್ತು.‌ ಈ ಬಾರಿಯೂ ವಿಶ್ವಕಪ್‌ ಗೆಲ್ಲುವ ಉತ್ಸಾಹದಲ್ಲಿದೆ.

ಭಾನುವಾರ ಬೇಯುಮಾಸ್‌ ಓವೆಲ್‌ನಲ್ಲಿ ಭಾರತದ ವನಿತೆಯರು ವೆಸ್ಟ್‌ ಇಂಡೀಸ್‌ ವಿರುದ್ಧ ತಮ್ಮ ಪಾಲಿನ ಮೊದಲ ಪಂದ್ಯ ಆಡುವ ಮೂಲಕ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಲಿದ್ದಾರೆ. ಭಾರತ ತಂಡ ಈ ಸಲ ವೆಸ್ಟ್‌ ಇಂಡೀಸ್‌, ಶ್ರೀಲಂಕಾ ಮತ್ತು ಅತಿಥೇಯ ಮಲೇಷ್ಯಾ ತಂಡಗಳೊಂದಿಗೆ ʼಎʼ ಗುಂಪಿನಲ್ಲಿದೆ.

ಈ ಟೂರ್ನಿಯಲ್ಲಿ 16 ತಂಡಗಳು ಕಣದಲ್ಲಿದ್ದು, 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಫೆಬ್ರವರಿ.2ರಂದು ಫೈನಲ್‌ ನಡೆಯಲಿದೆ.

ಈ ಬಾರಿ ಕರ್ನಾಟಕದ ನಿಕಿ ಪ್ರಸಾದ್‌ ಭಾರತ ಮಹಳಾ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಶೆಫಾಲಿ ವರ್ಮಾ ತಂಡದ ನಾಯಕಿಯಾಗಿದ್ದರು.

ಭಾರತ ಮಹಿಳಾ ತಂಡ: ನಿಕಿ ಪ್ರಸಾದ್‌(ನಾಯಕಿ), ಸನಿಕಾ ಚಾಲ್ಕೆ (ಉಪನಾಯಕಿ), ಜಿ.ತ್ರಿಷಾ, ಕಮಲಿನಿ ಜಿ (ವಿಕೆಟ್‌ ಕೀಪರ್‌), ಭಾವಿಕಾ ಅಹಿರೆ (ವಿಕೆಟ್‌ ಕೀಪರ್‌), ಐಶ್ವರಿ ಅವಸರೆ, ಮಿಥಿಲಾ ವಿನೋದ್‌, ವಿ.ಜೆ. ಜೋಶಿತಾ, ಸೋನಮ್‌ ಯಾದವ್‌, ಪರುಣಿಕಾ ಸಿಸೋಡಿಯಾ, ಕೇಸರಿ ದೃತಿ, ಆಯುಷಿ ಶುಕ್ಲಾ, ಅನಂದಿತಾ ಕಿಶೋರ್‌, ಎಂ.ಡಿ.ಶಬ್ನಮ್‌, ವೈಷ್ಣವಿ ಎಸ್‌.

ಆಂದೋಲನ ಡೆಸ್ಕ್

Recent Posts

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

20 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

53 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago