ಕ್ರೀಡೆ

ಐಸಿಸಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ 2025 ಟೂರ್ನಿ ಇಂದಿನಿಂದ ಆರಂಭ

 

ಕೌಲಾಲಂಪುರ್:‌ 19 ವರ್ಷದೊಳಗಿನ ಮಹಿಳಾ ಟಿ20‌ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಉದಯೋನ್ಮುಖ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾತರರಾಗಿದ್ದಾರೆ.

2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗಿತ್ತು.‌ ಈ ಬಾರಿಯೂ ವಿಶ್ವಕಪ್‌ ಗೆಲ್ಲುವ ಉತ್ಸಾಹದಲ್ಲಿದೆ.

ಭಾನುವಾರ ಬೇಯುಮಾಸ್‌ ಓವೆಲ್‌ನಲ್ಲಿ ಭಾರತದ ವನಿತೆಯರು ವೆಸ್ಟ್‌ ಇಂಡೀಸ್‌ ವಿರುದ್ಧ ತಮ್ಮ ಪಾಲಿನ ಮೊದಲ ಪಂದ್ಯ ಆಡುವ ಮೂಲಕ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಲಿದ್ದಾರೆ. ಭಾರತ ತಂಡ ಈ ಸಲ ವೆಸ್ಟ್‌ ಇಂಡೀಸ್‌, ಶ್ರೀಲಂಕಾ ಮತ್ತು ಅತಿಥೇಯ ಮಲೇಷ್ಯಾ ತಂಡಗಳೊಂದಿಗೆ ʼಎʼ ಗುಂಪಿನಲ್ಲಿದೆ.

ಈ ಟೂರ್ನಿಯಲ್ಲಿ 16 ತಂಡಗಳು ಕಣದಲ್ಲಿದ್ದು, 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಫೆಬ್ರವರಿ.2ರಂದು ಫೈನಲ್‌ ನಡೆಯಲಿದೆ.

ಈ ಬಾರಿ ಕರ್ನಾಟಕದ ನಿಕಿ ಪ್ರಸಾದ್‌ ಭಾರತ ಮಹಳಾ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಶೆಫಾಲಿ ವರ್ಮಾ ತಂಡದ ನಾಯಕಿಯಾಗಿದ್ದರು.

ಭಾರತ ಮಹಿಳಾ ತಂಡ: ನಿಕಿ ಪ್ರಸಾದ್‌(ನಾಯಕಿ), ಸನಿಕಾ ಚಾಲ್ಕೆ (ಉಪನಾಯಕಿ), ಜಿ.ತ್ರಿಷಾ, ಕಮಲಿನಿ ಜಿ (ವಿಕೆಟ್‌ ಕೀಪರ್‌), ಭಾವಿಕಾ ಅಹಿರೆ (ವಿಕೆಟ್‌ ಕೀಪರ್‌), ಐಶ್ವರಿ ಅವಸರೆ, ಮಿಥಿಲಾ ವಿನೋದ್‌, ವಿ.ಜೆ. ಜೋಶಿತಾ, ಸೋನಮ್‌ ಯಾದವ್‌, ಪರುಣಿಕಾ ಸಿಸೋಡಿಯಾ, ಕೇಸರಿ ದೃತಿ, ಆಯುಷಿ ಶುಕ್ಲಾ, ಅನಂದಿತಾ ಕಿಶೋರ್‌, ಎಂ.ಡಿ.ಶಬ್ನಮ್‌, ವೈಷ್ಣವಿ ಎಸ್‌.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

9 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

10 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

10 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

11 hours ago