ಕ್ರೀಡೆ

ಐಸಿಸಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ 2025 ಟೂರ್ನಿ ಇಂದಿನಿಂದ ಆರಂಭ

 

ಕೌಲಾಲಂಪುರ್:‌ 19 ವರ್ಷದೊಳಗಿನ ಮಹಿಳಾ ಟಿ20‌ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಉದಯೋನ್ಮುಖ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾತರರಾಗಿದ್ದಾರೆ.

2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗಿತ್ತು.‌ ಈ ಬಾರಿಯೂ ವಿಶ್ವಕಪ್‌ ಗೆಲ್ಲುವ ಉತ್ಸಾಹದಲ್ಲಿದೆ.

ಭಾನುವಾರ ಬೇಯುಮಾಸ್‌ ಓವೆಲ್‌ನಲ್ಲಿ ಭಾರತದ ವನಿತೆಯರು ವೆಸ್ಟ್‌ ಇಂಡೀಸ್‌ ವಿರುದ್ಧ ತಮ್ಮ ಪಾಲಿನ ಮೊದಲ ಪಂದ್ಯ ಆಡುವ ಮೂಲಕ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಲಿದ್ದಾರೆ. ಭಾರತ ತಂಡ ಈ ಸಲ ವೆಸ್ಟ್‌ ಇಂಡೀಸ್‌, ಶ್ರೀಲಂಕಾ ಮತ್ತು ಅತಿಥೇಯ ಮಲೇಷ್ಯಾ ತಂಡಗಳೊಂದಿಗೆ ʼಎʼ ಗುಂಪಿನಲ್ಲಿದೆ.

ಈ ಟೂರ್ನಿಯಲ್ಲಿ 16 ತಂಡಗಳು ಕಣದಲ್ಲಿದ್ದು, 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಫೆಬ್ರವರಿ.2ರಂದು ಫೈನಲ್‌ ನಡೆಯಲಿದೆ.

ಈ ಬಾರಿ ಕರ್ನಾಟಕದ ನಿಕಿ ಪ್ರಸಾದ್‌ ಭಾರತ ಮಹಳಾ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಶೆಫಾಲಿ ವರ್ಮಾ ತಂಡದ ನಾಯಕಿಯಾಗಿದ್ದರು.

ಭಾರತ ಮಹಿಳಾ ತಂಡ: ನಿಕಿ ಪ್ರಸಾದ್‌(ನಾಯಕಿ), ಸನಿಕಾ ಚಾಲ್ಕೆ (ಉಪನಾಯಕಿ), ಜಿ.ತ್ರಿಷಾ, ಕಮಲಿನಿ ಜಿ (ವಿಕೆಟ್‌ ಕೀಪರ್‌), ಭಾವಿಕಾ ಅಹಿರೆ (ವಿಕೆಟ್‌ ಕೀಪರ್‌), ಐಶ್ವರಿ ಅವಸರೆ, ಮಿಥಿಲಾ ವಿನೋದ್‌, ವಿ.ಜೆ. ಜೋಶಿತಾ, ಸೋನಮ್‌ ಯಾದವ್‌, ಪರುಣಿಕಾ ಸಿಸೋಡಿಯಾ, ಕೇಸರಿ ದೃತಿ, ಆಯುಷಿ ಶುಕ್ಲಾ, ಅನಂದಿತಾ ಕಿಶೋರ್‌, ಎಂ.ಡಿ.ಶಬ್ನಮ್‌, ವೈಷ್ಣವಿ ಎಸ್‌.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

2 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

2 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

3 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

4 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

4 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

5 hours ago