ಕ್ರೀಡೆ

ಐಸಿಸಿ ವಿಶ್ವಕಪ್ 23: ಭಾರತ- ಪಾಕ್ ಪಂದ್ಯಕ್ಕೆ ಜನಸಾಗರ, ಗೆಲುವಿಗಾಗಿ ಪ್ರಾರ್ಥನೆ

ಅಹಮದಾಬಾದ್ : ಐಸಿಸಿ  ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಿಂದಾಗಿ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರವೇ ಕಂಡುಬಂದಿತು. ಅಭಿಮಾನಿಗಳು ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗಿದ್ದಾರೆ.

ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗು ಬಡಿದು ತನ್ನ ಗೆಲುವಿನ ಅಭಿಯಾನ ಮುಂದುವರೆಸುವ ವಿಶ್ವಾಸದಲ್ಲಿದ್ದರೆ, ಟೀಮ್ ಇಂಡಿಯಾ ವಿರುದ್ಧ ತಮ್ಮ ವಿಶ್ವಕಪ್ ಬರವನ್ನು ಕೊನೆಗೊಳಿಸಲು ಪಾಕ್ ಎದುರು ನೋಡುತ್ತಿದೆ.

ಬೆಳಗ್ಗೆಯಿಂದಲೇ ಕ್ರೀಡಾಂಗಣದ ಹೊರಗೆ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು. ಅವರಲ್ಲಿ ಹಲವರು ಟ್ರೇಡ್‌ಮಾರ್ಕ್ ಬ್ಲೂ ಇಂಡಿಯನ್ ಕ್ರಿಕೆಟ್ ಟೀಮ್ ಜೆರ್ಸಿಗಳನ್ನು ಧರಿಸಿ, ಕೈಯಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಿಡಿದು, ಇಂಡಿಯಾ” “ಇಂಡಿಯಾ” ಎಂದು ಕೂಗುತ್ತಿದ್ದರು. ಪಂದ್ಯ ವೀಕ್ಷಿಸಲು“ನಾವೆಲ್ಲರೂ ಉತ್ಸುಕರಾಗಿದ್ದೇವೆ. ರೋಹಿತ್ ಮತ್ತು ವಿರಾಟ್ ಇಂದು ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಭಾವಿಸುವುದಾಗಿ ಅಭಿಮಾನಿಯೊಬ್ಬರು ಹೇಳಿದರು.

https://x.com/ANI/status/1713054702093648135?s=20

ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ವಿರುದ್ಧ ಗೆಲುವಿನೊಂದಿಗೆ ಪ್ರಾರಂಭಿಸಿದೆ. ಪಾಕಿಸ್ತಾನ ಕೂಡಾ ಎರಡು ಪಂದ್ಯಗಳಲ್ಲಿ ಎರಡು ವಿಜಯಗಳನ್ನು ಹೊಂದಿದ್ದು, ಇಂದಿನ ಪಂದ್ಯ ಉಭಯ ದೇಶಗಳಿಗೂ ಪ್ರಮುಖವಾಗಿದೆ.

https://x.com/ANI/status/1713050143275315563?s=20

ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಮೆಗಾಸ್ಟಾರ್‌ಗಳಾದ ಮೆನ್ ಇನ್ ಬ್ಲೂ ಪಾಕಿಸ್ತಾನದೊಂದಿಗೆ 50 ಓವರ್‌ಗಳ ವಿಶ್ವಕಪ್‌ಗಳಲ್ಲಿ ದೇಶದ ಗೆಲುವಿನ ಸರಣಿಯನ್ನು ಮುಂದುವರಿಸಲು ಮತ್ತು ತಮ್ಮ ಸ್ಥಿರ ಪ್ರದರ್ಶ ಮುಂದುವರಿಸುತ್ತಾರೆ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಮತ್ತೊಂದೆಡೆ ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ದೇಶದ ವಿವಿಧೆಡೆ ಪೂಜೆ, ಹವನ, ಪುನಸ್ಕಾರಗಳು ನಡೆಯುತ್ತಿವೆ. ಬಿಹಾರದಲ್ಲಿ ಭಾರತದ ಆಟಗಾರರ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ಹೋಮ ನಡೆಸಲಾಯಿತು.

https://x.com/ANI/status/1713065414518026740?s=20

andolanait

Recent Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

29 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

45 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

1 hour ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

1 hour ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

3 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

3 hours ago