ಕ್ರೀಡೆ

ಐಸಿಸಿ ವಿಶ್ವಕಪ್ 23: ಭಾರತ- ಪಾಕ್ ಪಂದ್ಯಕ್ಕೆ ಜನಸಾಗರ, ಗೆಲುವಿಗಾಗಿ ಪ್ರಾರ್ಥನೆ

ಅಹಮದಾಬಾದ್ : ಐಸಿಸಿ  ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಿಂದಾಗಿ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರವೇ ಕಂಡುಬಂದಿತು. ಅಭಿಮಾನಿಗಳು ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗಿದ್ದಾರೆ.

ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗು ಬಡಿದು ತನ್ನ ಗೆಲುವಿನ ಅಭಿಯಾನ ಮುಂದುವರೆಸುವ ವಿಶ್ವಾಸದಲ್ಲಿದ್ದರೆ, ಟೀಮ್ ಇಂಡಿಯಾ ವಿರುದ್ಧ ತಮ್ಮ ವಿಶ್ವಕಪ್ ಬರವನ್ನು ಕೊನೆಗೊಳಿಸಲು ಪಾಕ್ ಎದುರು ನೋಡುತ್ತಿದೆ.

ಬೆಳಗ್ಗೆಯಿಂದಲೇ ಕ್ರೀಡಾಂಗಣದ ಹೊರಗೆ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು. ಅವರಲ್ಲಿ ಹಲವರು ಟ್ರೇಡ್‌ಮಾರ್ಕ್ ಬ್ಲೂ ಇಂಡಿಯನ್ ಕ್ರಿಕೆಟ್ ಟೀಮ್ ಜೆರ್ಸಿಗಳನ್ನು ಧರಿಸಿ, ಕೈಯಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಿಡಿದು, ಇಂಡಿಯಾ” “ಇಂಡಿಯಾ” ಎಂದು ಕೂಗುತ್ತಿದ್ದರು. ಪಂದ್ಯ ವೀಕ್ಷಿಸಲು“ನಾವೆಲ್ಲರೂ ಉತ್ಸುಕರಾಗಿದ್ದೇವೆ. ರೋಹಿತ್ ಮತ್ತು ವಿರಾಟ್ ಇಂದು ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಭಾವಿಸುವುದಾಗಿ ಅಭಿಮಾನಿಯೊಬ್ಬರು ಹೇಳಿದರು.

https://x.com/ANI/status/1713054702093648135?s=20

ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ವಿರುದ್ಧ ಗೆಲುವಿನೊಂದಿಗೆ ಪ್ರಾರಂಭಿಸಿದೆ. ಪಾಕಿಸ್ತಾನ ಕೂಡಾ ಎರಡು ಪಂದ್ಯಗಳಲ್ಲಿ ಎರಡು ವಿಜಯಗಳನ್ನು ಹೊಂದಿದ್ದು, ಇಂದಿನ ಪಂದ್ಯ ಉಭಯ ದೇಶಗಳಿಗೂ ಪ್ರಮುಖವಾಗಿದೆ.

https://x.com/ANI/status/1713050143275315563?s=20

ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಮೆಗಾಸ್ಟಾರ್‌ಗಳಾದ ಮೆನ್ ಇನ್ ಬ್ಲೂ ಪಾಕಿಸ್ತಾನದೊಂದಿಗೆ 50 ಓವರ್‌ಗಳ ವಿಶ್ವಕಪ್‌ಗಳಲ್ಲಿ ದೇಶದ ಗೆಲುವಿನ ಸರಣಿಯನ್ನು ಮುಂದುವರಿಸಲು ಮತ್ತು ತಮ್ಮ ಸ್ಥಿರ ಪ್ರದರ್ಶ ಮುಂದುವರಿಸುತ್ತಾರೆ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಮತ್ತೊಂದೆಡೆ ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ದೇಶದ ವಿವಿಧೆಡೆ ಪೂಜೆ, ಹವನ, ಪುನಸ್ಕಾರಗಳು ನಡೆಯುತ್ತಿವೆ. ಬಿಹಾರದಲ್ಲಿ ಭಾರತದ ಆಟಗಾರರ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ಹೋಮ ನಡೆಸಲಾಯಿತು.

https://x.com/ANI/status/1713065414518026740?s=20

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago