ಕ್ರೀಡೆ

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ : ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್‌ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್‌ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 42.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು.

https://x.com/cricketworldcup/status/1712843494002221411?s=20

ನ್ಯೂಜಿಲೆಂಡ್‌ ಪರ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 78 ಹಾಗೂ ಮಿಚೆಲ್‌ 89 ರನ್‌ಗಳಿಸಿದರು.

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago