ಚೆನ್ನೈ : ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.
ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ 42.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 248 ರನ್ ಗಳಿಸುವ ಮೂಲಕ ಜಯದ ನಗೆ ಬೀರಿತು.
https://x.com/cricketworldcup/status/1712843494002221411?s=20
ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಅಜೇಯ 78 ಹಾಗೂ ಮಿಚೆಲ್ 89 ರನ್ಗಳಿಸಿದರು.
ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…