ಕ್ರೀಡೆ

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ : ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್‌ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್‌ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 42.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು.

https://x.com/cricketworldcup/status/1712843494002221411?s=20

ನ್ಯೂಜಿಲೆಂಡ್‌ ಪರ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 78 ಹಾಗೂ ಮಿಚೆಲ್‌ 89 ರನ್‌ಗಳಿಸಿದರು.

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago