ಕ್ರೀಡೆ

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ : ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 ವಿಕೆಟ್‌ಗಳ ಜಯ ದಾಖಲಿಸಿದ್ದು, ಈ ಮೂಲಕ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ಮುಷ್ಫಿಕರ್‌ ರಹೀಂ ಗಳಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 245 ರನ್ ಕಲೆಹಾಕಿತು. ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 42.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು.

https://x.com/cricketworldcup/status/1712843494002221411?s=20

ನ್ಯೂಜಿಲೆಂಡ್‌ ಪರ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 78 ಹಾಗೂ ಮಿಚೆಲ್‌ 89 ರನ್‌ಗಳಿಸಿದರು.

ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ದಾಖಲೆ
ಇನ್ನು ಈ ಜಯದ ಮೂಲಕ ನ್ಯೂಜಿಲೆಂಡ್ ತಂಡ ವಿಶ್ವಕಪ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ತನ್ನ ಅಜೇಯ ಓಟ ಮುಂದುವರೆಸಿದೆ. ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ಗೆ ವಿಶ್ವಕಪ್ ಟೂರ್ನಿಯಲ್ಲಿ ಇದು ಸತತ 6ನೇ ಗೆಲುವಾಗಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಿಯಾಗಿದ್ದು, ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಸತತ 8 ವಿಶ್ವಕಪ್ ಪಂದ್ಯಗಳಲ್ಲಿ ಜಯಗಳಿಸಿದೆ. ಅಂತೆಯೇ ಇದೇ ಪಾಕಿಸ್ತಾನ ವಿರುದ್ಧ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ಸಾಧಿಸಿದೆ. ಅಂತೆಯೇ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ ಸತತ 6 ಗೆಲುವು ಸಾಧಿಸಿದೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

3 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

4 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

5 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

5 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

6 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

7 hours ago