ಕ್ರೀಡೆ

“ಧೋನಿ ನಾಯಕರಾಗಿದ್ದರೆ ಆರ್‌ ಸಿಬಿ ಮೂರು ಸಲ ಐಪಿಎಲ್‌ ಕಪ್‌ ಗೆಲ್ಲುತ್ತಿತ್ತು’

ನವದೆಹಲಿ: ಒಂದು ವೇಳೆ ಮಹೇಂದ್ರ ಸಿಂಗ್‌ ಧೋನಿ ಆರ್‌ಸಿಬಿ ತಂಡದ ನಾಯಕರಾಗಿದ್ದರೆ, ತಂಡ ಇಷ್ಟರಲ್ಲಿ ಮೂರು ಸಲ ಚಾಂಪಿಯನ್‌ ಆಗಿರುತ್ತಿತ್ತು ಎಂದಿದ್ದಾರೆ ಪಾಕಿಸ್ತಾನದ ಲೆಜೆಂಡ್ರಿ ವೇಗಿ ವಾಸಿಮ್‌ ಅಕ್ರಮ್‌!

ಐಪಿಎಲ್‌ನ ಅತ್ಯಂತ ನತದೃಷ್ಟ ತಂಡಗಳಲ್ಲಿ ಒಂದಾದ ರಾಯಲ್‌ ಚಾಲೆಂಜರ್ ಬೆಂಗಳೂರು, 2009, 2011 ಮತ್ತು 2016ರಲ್ಲಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿತ್ತು. ಆದರೆ ಮೂರೂ ಸಲ ರನ್ನರ್ ಅಪ್‌ ಸ್ಥಾನಕ್ಕೆ ಸಮಾಧಾನಪಟ್ಟಿತ್ತು. ಒಂದು ವೇಳೆ ಮಹೇಂದ್ರ ಸಿಂಗ್‌ ಧೋನಿ ಆರ್‌ಸಿಬಿ ತಂಡದ ನಾಯಕರಾಗಿದ್ದರೆ, ತಂಡ ಇಷ್ಟರಲ್ಲಿ ಮೂರು ಸಲ ಚಾಂಪಿಯನ್‌ ಆಗಿರುತ್ತಿತ್ತು ಎಂಬುದಾಗಿ ಕ್ರಿಕೆಟ್‌ ವೆಬ್‌ಸೈಟ್‌ ಜತೆಗಿನ ಸಂದರ್ಶನವೊಂದರಲ್ಲಿ ಅಕ್ರಮ್‌ ಅಭಿಪ್ರಾಯಪಟ್ಟಿದ್ದಾರೆ.

“ಅಪಾರ ಅಭಿಮಾನಿಗಳ ಬೆಂಬಲವನ್ನು ಹೊಂದಿರುವ ಆರ್‌ಸಿಬಿ ಈವರೆಗೆ ಒಮ್ಮೆಯೂ ಚಾಂಪಿಯನ್‌ ಆಗದಿದೇ ಇರುವುದು ದೌರ್ಭಾಗ್ಯ. ಕ್ರಿಕೆಟಿನ ಆಧುನಿಕ ಯುಗದ ಶ್ರೇಷ್ಠ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ಹೊಂದಿರುವ ತಂಡವಿದು. ಹಿಂದೆ ಗೇಲ್‌, ಎಬಿಡಿ ಅವರಂಥ ಸ್ಫೋಟಕ ಆಟಗಾರರಿದ್ದರು. ಆದರೂ ಗೆಲುವು ಮರೀಚಿಕೆಯೇ ಆಗಿದೆ. ಆ ಮೂರು ಫೈನಲ್‌ಗ‌ಳ ವೇಳೆ ಧೋನಿಯವರ ನಾಯಕತ್ವ ಹೊಂದಿದ್ದೇ ಆದಲ್ಲಿ ಆರ್‌ಸಿಬಿ ಖಂಡಿತವಾಗಿಯೂ ಕಪ್‌ ಗೆಲ್ಲುತ್ತಿತ್ತು’ ಎಂದಿದ್ದಾರೆ.

“ಧೋನಿ ಕ್ರಿಕೆಟ್‌ನ ವಿಶ್ವದ ಮಹಾನ್‌ ಹಾಗೂ ಜಾಣ ನಾಯಕರಲ್ಲೊಬ್ಬರು. ಅವರಿಗೆ ತಂಡವನ್ನು ಮುನ್ನಡೆಸುವುದೊಂದು ಹವ್ಯಾಸವೇ ಆಗಿದೆ. ಆಟಗಾರರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರನ್ನು ಹೇಗೆ ಹುರಿದುಂಬಿಸಬೇಕು, ಅವರ ಆಟವನ್ನು ಹೇಗೆ ಹೊರತೆಗೆಯಬೇಕು ಎಂಬುದೆಲ್ಲ ಚೆನ್ನಾಗಿ ಕರಗತವಾಗಿದೆ. ಖಂಡಿತವಾಗಿಯೂ ಧೋನಿ ಕೂಲ್‌ ಅಲ್ಲ, ಹೊರಗಿನಿಂದ ಹಾಗೆ ತೋರಿಸಿಕೊಳ್ಳುತ್ತಾರೆ, ಅಷ್ಟೇ. ಆಟಗಾರರಲ್ಲಿ ಆತ್ಮವಿಶ್ವಾಸ ಮೂಡಿಸುವ ವಿಧಾನ ಅವರ ಹೆಚ್ಚುಗಾರಿಕೆ,’ ಎಂದು ಅಕ್ರಮ್‌ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago