ಕ್ರೀಡೆ

“ಧೋನಿ ನಾಯಕರಾಗಿದ್ದರೆ ಆರ್‌ ಸಿಬಿ ಮೂರು ಸಲ ಐಪಿಎಲ್‌ ಕಪ್‌ ಗೆಲ್ಲುತ್ತಿತ್ತು’

ನವದೆಹಲಿ: ಒಂದು ವೇಳೆ ಮಹೇಂದ್ರ ಸಿಂಗ್‌ ಧೋನಿ ಆರ್‌ಸಿಬಿ ತಂಡದ ನಾಯಕರಾಗಿದ್ದರೆ, ತಂಡ ಇಷ್ಟರಲ್ಲಿ ಮೂರು ಸಲ ಚಾಂಪಿಯನ್‌ ಆಗಿರುತ್ತಿತ್ತು ಎಂದಿದ್ದಾರೆ ಪಾಕಿಸ್ತಾನದ ಲೆಜೆಂಡ್ರಿ ವೇಗಿ ವಾಸಿಮ್‌ ಅಕ್ರಮ್‌!

ಐಪಿಎಲ್‌ನ ಅತ್ಯಂತ ನತದೃಷ್ಟ ತಂಡಗಳಲ್ಲಿ ಒಂದಾದ ರಾಯಲ್‌ ಚಾಲೆಂಜರ್ ಬೆಂಗಳೂರು, 2009, 2011 ಮತ್ತು 2016ರಲ್ಲಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿತ್ತು. ಆದರೆ ಮೂರೂ ಸಲ ರನ್ನರ್ ಅಪ್‌ ಸ್ಥಾನಕ್ಕೆ ಸಮಾಧಾನಪಟ್ಟಿತ್ತು. ಒಂದು ವೇಳೆ ಮಹೇಂದ್ರ ಸಿಂಗ್‌ ಧೋನಿ ಆರ್‌ಸಿಬಿ ತಂಡದ ನಾಯಕರಾಗಿದ್ದರೆ, ತಂಡ ಇಷ್ಟರಲ್ಲಿ ಮೂರು ಸಲ ಚಾಂಪಿಯನ್‌ ಆಗಿರುತ್ತಿತ್ತು ಎಂಬುದಾಗಿ ಕ್ರಿಕೆಟ್‌ ವೆಬ್‌ಸೈಟ್‌ ಜತೆಗಿನ ಸಂದರ್ಶನವೊಂದರಲ್ಲಿ ಅಕ್ರಮ್‌ ಅಭಿಪ್ರಾಯಪಟ್ಟಿದ್ದಾರೆ.

“ಅಪಾರ ಅಭಿಮಾನಿಗಳ ಬೆಂಬಲವನ್ನು ಹೊಂದಿರುವ ಆರ್‌ಸಿಬಿ ಈವರೆಗೆ ಒಮ್ಮೆಯೂ ಚಾಂಪಿಯನ್‌ ಆಗದಿದೇ ಇರುವುದು ದೌರ್ಭಾಗ್ಯ. ಕ್ರಿಕೆಟಿನ ಆಧುನಿಕ ಯುಗದ ಶ್ರೇಷ್ಠ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ಹೊಂದಿರುವ ತಂಡವಿದು. ಹಿಂದೆ ಗೇಲ್‌, ಎಬಿಡಿ ಅವರಂಥ ಸ್ಫೋಟಕ ಆಟಗಾರರಿದ್ದರು. ಆದರೂ ಗೆಲುವು ಮರೀಚಿಕೆಯೇ ಆಗಿದೆ. ಆ ಮೂರು ಫೈನಲ್‌ಗ‌ಳ ವೇಳೆ ಧೋನಿಯವರ ನಾಯಕತ್ವ ಹೊಂದಿದ್ದೇ ಆದಲ್ಲಿ ಆರ್‌ಸಿಬಿ ಖಂಡಿತವಾಗಿಯೂ ಕಪ್‌ ಗೆಲ್ಲುತ್ತಿತ್ತು’ ಎಂದಿದ್ದಾರೆ.

“ಧೋನಿ ಕ್ರಿಕೆಟ್‌ನ ವಿಶ್ವದ ಮಹಾನ್‌ ಹಾಗೂ ಜಾಣ ನಾಯಕರಲ್ಲೊಬ್ಬರು. ಅವರಿಗೆ ತಂಡವನ್ನು ಮುನ್ನಡೆಸುವುದೊಂದು ಹವ್ಯಾಸವೇ ಆಗಿದೆ. ಆಟಗಾರರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರನ್ನು ಹೇಗೆ ಹುರಿದುಂಬಿಸಬೇಕು, ಅವರ ಆಟವನ್ನು ಹೇಗೆ ಹೊರತೆಗೆಯಬೇಕು ಎಂಬುದೆಲ್ಲ ಚೆನ್ನಾಗಿ ಕರಗತವಾಗಿದೆ. ಖಂಡಿತವಾಗಿಯೂ ಧೋನಿ ಕೂಲ್‌ ಅಲ್ಲ, ಹೊರಗಿನಿಂದ ಹಾಗೆ ತೋರಿಸಿಕೊಳ್ಳುತ್ತಾರೆ, ಅಷ್ಟೇ. ಆಟಗಾರರಲ್ಲಿ ಆತ್ಮವಿಶ್ವಾಸ ಮೂಡಿಸುವ ವಿಧಾನ ಅವರ ಹೆಚ್ಚುಗಾರಿಕೆ,’ ಎಂದು ಅಕ್ರಮ್‌ ಹೇಳಿದ್ದಾರೆ.

andolanait

Recent Posts

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 mins ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

13 mins ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

1 hour ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

5 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago