ಕ್ರೀಡೆ

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘‘ಐಐಎಸ್ ಸಿಖಾಯೇಗ’ ಆರಂಭ

ಬೆಂಗಳೂರು : ಭಾರತದ ಮುಂದಿನ ಒಲಿಂಪಿಕ್‌ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕ್ರೀಡಾಪಟುಗಳು ತಮ್ಮ ಕೈಬೆರಳ ತುದಿಯಲ್ಲಿ ವಿಶ್ವಮಟ್ಟದ ಕ್ರೀಡಾ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ.

ಸುಲಭವಾಗಿ ಅರ್ಥವಾಗುವ ಚಿಕ್ಕ-ಚಿಕ್ಕ ವೀಡಿಯೊಗಳ ಮೂಲಕ IIS ನ ತರಬೇತುದಾರರು, ಕೋಚ್‌ಗಳು, ತಜ್ಞರು ಹಾಗೂ ಯುವ ಕ್ರೀಡಾಪಟುಗಳ ಅನುಭವವನ್ನು ಹಂಚಿಕೊಳ್ಳುತ್ತಾರೆ. ಫಿಟ್‍ನೆಸ್‌ನ ಮೂಲಭೂತಗಳಿಂದ ಹಿಡಿದು ಹೈ-ಪರ್ಫಾರ್ಮೆನ್ಸ್ ಕ್ರೀಡೆಯ ಸೂಕ್ಷ್ಮ ಅಂಶಗಳವರೆಗೂ ತಿಳಿಯಲು IIS Sikhaega ಕ್ರೀಡಾಪಟುಗಳಿಗೆ ಮಾರ್ಗದರ್ಶನ ಒದಗಿಸುತ್ತದೆ.ತಿ ತಿಂಗಳು ಮೂರು ವೀಡಿಯೊಗಳನ್ನು ಇನ್‍ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಕ್ರೀಡಾಪಟಗಳಿಗೆ ಇದು ಉಪಯುಕ್ತವಾಗಲಿದೆ.
ಈ ಬಗ್ಗೆ ಮಾತನಾಡಿದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ಅಧ್ಯಕ್ಷೆ ಮನೀಷಾ ಮಲ್ಹೋತ್ರಾ “ಭಾರತದ ಎಲ್ಲಾ ಕ್ರೀಡಾಪಟುಗಳಿಗೆ IIS ನ ಪರಿಣಿತಿ ಮತ್ತು ತರಬೇತಿ ತಲುಪುವುದು ನಮ್ಮ ಧ್ಯೇಯದ ಒಂದು ಭಾಗ. IIS Sikhaega ಮೂಲಕ, ನಮ್ಮ ಕೋಚ್‌ಗಳು, ಸೌಲಭ್ಯಗಳು ಹಾಗೂ ತಾಂತ್ರಿಕ ತಿಳುವಳಿಕೆಯನ್ನು IIS ಹೊರಗಿನ ಯುವಕರಿಗೂ ತಲುಪಿಸಲು ಬಯಸುತ್ತೇವೆ ಎಂದರು’
ಈ ಯೋಜನೆಯ ಮೂಲಕ IIS, ತಂತ್ರಜ್ಞಾನ, ಪರಿಣಿತಿ ಮತ್ತು ಲಭ್ಯತೆಯನ್ನು ಒಟ್ಟುಗೂಡಿಸಿ ಭಾರತದ ಮುಂದಿನ ತಲೆಮಾರಿನ ಕ್ರೀಡಾಪಟುಗಳನ್ನು ಬೆಳೆಸುವ ತನ್ನ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತಿದೆ. IIS Sikhaega ಕೇವಲ ಡಿಜಿಟಲ್ ಪ್ರಾರಂಭವಲ್ಲ – ಇದು ಭಾರತದ ಕ್ರೀಡಾ ಸಂಸ್ಕೃತಿಯನ್ನು ಬಲಪಡಿಸುವತ್ತ ಒಂದು ಹೆಜ್ಜೆ ಆಗಿರಲಿದೆ.

ಆಂದೋಲನ ಡೆಸ್ಕ್

Recent Posts

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

9 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

57 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago