ಕ್ರೀಡೆ

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘‘ಐಐಎಸ್ ಸಿಖಾಯೇಗ’ ಆರಂಭ

ಬೆಂಗಳೂರು : ಭಾರತದ ಮುಂದಿನ ಒಲಿಂಪಿಕ್‌ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕ್ರೀಡಾಪಟುಗಳು ತಮ್ಮ ಕೈಬೆರಳ ತುದಿಯಲ್ಲಿ ವಿಶ್ವಮಟ್ಟದ ಕ್ರೀಡಾ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ.

ಸುಲಭವಾಗಿ ಅರ್ಥವಾಗುವ ಚಿಕ್ಕ-ಚಿಕ್ಕ ವೀಡಿಯೊಗಳ ಮೂಲಕ IIS ನ ತರಬೇತುದಾರರು, ಕೋಚ್‌ಗಳು, ತಜ್ಞರು ಹಾಗೂ ಯುವ ಕ್ರೀಡಾಪಟುಗಳ ಅನುಭವವನ್ನು ಹಂಚಿಕೊಳ್ಳುತ್ತಾರೆ. ಫಿಟ್‍ನೆಸ್‌ನ ಮೂಲಭೂತಗಳಿಂದ ಹಿಡಿದು ಹೈ-ಪರ್ಫಾರ್ಮೆನ್ಸ್ ಕ್ರೀಡೆಯ ಸೂಕ್ಷ್ಮ ಅಂಶಗಳವರೆಗೂ ತಿಳಿಯಲು IIS Sikhaega ಕ್ರೀಡಾಪಟುಗಳಿಗೆ ಮಾರ್ಗದರ್ಶನ ಒದಗಿಸುತ್ತದೆ.ತಿ ತಿಂಗಳು ಮೂರು ವೀಡಿಯೊಗಳನ್ನು ಇನ್‍ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಕ್ರೀಡಾಪಟಗಳಿಗೆ ಇದು ಉಪಯುಕ್ತವಾಗಲಿದೆ.
ಈ ಬಗ್ಗೆ ಮಾತನಾಡಿದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ಅಧ್ಯಕ್ಷೆ ಮನೀಷಾ ಮಲ್ಹೋತ್ರಾ “ಭಾರತದ ಎಲ್ಲಾ ಕ್ರೀಡಾಪಟುಗಳಿಗೆ IIS ನ ಪರಿಣಿತಿ ಮತ್ತು ತರಬೇತಿ ತಲುಪುವುದು ನಮ್ಮ ಧ್ಯೇಯದ ಒಂದು ಭಾಗ. IIS Sikhaega ಮೂಲಕ, ನಮ್ಮ ಕೋಚ್‌ಗಳು, ಸೌಲಭ್ಯಗಳು ಹಾಗೂ ತಾಂತ್ರಿಕ ತಿಳುವಳಿಕೆಯನ್ನು IIS ಹೊರಗಿನ ಯುವಕರಿಗೂ ತಲುಪಿಸಲು ಬಯಸುತ್ತೇವೆ ಎಂದರು’
ಈ ಯೋಜನೆಯ ಮೂಲಕ IIS, ತಂತ್ರಜ್ಞಾನ, ಪರಿಣಿತಿ ಮತ್ತು ಲಭ್ಯತೆಯನ್ನು ಒಟ್ಟುಗೂಡಿಸಿ ಭಾರತದ ಮುಂದಿನ ತಲೆಮಾರಿನ ಕ್ರೀಡಾಪಟುಗಳನ್ನು ಬೆಳೆಸುವ ತನ್ನ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತಿದೆ. IIS Sikhaega ಕೇವಲ ಡಿಜಿಟಲ್ ಪ್ರಾರಂಭವಲ್ಲ – ಇದು ಭಾರತದ ಕ್ರೀಡಾ ಸಂಸ್ಕೃತಿಯನ್ನು ಬಲಪಡಿಸುವತ್ತ ಒಂದು ಹೆಜ್ಜೆ ಆಗಿರಲಿದೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago