ಕ್ರೀಡೆ

ಸಿಡಬ್ಲ್ಯೂಸಿ-23 ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್‌ ಖಾನ್‌ ಕೈಬಿಟ್ಟ ಪಿಸಿಬಿ: ಆಕ್ರೋಶದ ಬಳಿಕ ಹೊಸ ವೀಡಿಯೋ

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ.

ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ ವಿಶ್ವಕಪ್ ನ್ನು ಗೆದ್ದ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದ ಇಮ್ರಾನ್ ಖಾನ್ ಅವರನ್ನು ಈ ಹಿಂದಿನ ವೀಡಿಯೋದಲ್ಲಿ ಕೈಬಿಡಲಾಗಿತ್ತು. ಆದರೆ ಈಗ ಹೊಸ ವೀಡಿಯೋದಲ್ಲಿ ಇಮ್ರಾನ್ ಖಾನ್ ನೇತೃತ್ವದ 1992 ರ ವಿಶ್ವಕಪ್ ತಂಡದ ವೀಡಿಯೋ ತುಣುಕುಗಳನ್ನು ಸೇರಿಸಲಾಗಿದೆ.

ಅಲ್ಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಅಭಿಯಾನದ ವೀಡಿಯೊವನ್ನು ಆಗಸ್ಟ್ 14 ರಂದು ಅಪ್‌ಲೋಡ್ ಮಾಡಲಾಗಿತ್ತು. ಆದರೆ ಅದರಲ್ಲಿ ಇಮ್ರಾನ್ ಖಾನ್ ಇಲ್ಲದೇ ಇದ್ದದ್ದು ಪಾಕ್ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಹೊಸ ವೀಡಿಯೊ ಇಮ್ರಾನ್ ತನ್ನ ಸಹ ಆಟಗಾರರೊಂದಿಗೆ ವಿಶ್ವಕಪ್ ಗೆಲುವನ್ನು ಆಚರಿಸುತ್ತಿರುವ ಮತ್ತು WC ಟ್ರೋಫಿಯನ್ನು ಹಿಡಿದಿರುವ ಫ್ರೇಮ್‌ಗಳನ್ನು ಒಳಗೊಂಡಿದೆ.

ಗಮನಾರ್ಹವಾಗಿ, ಪಾಕಿಸ್ತಾನದ ಲೆಜೆಂಡರಿ ವೇಗಿ ವಾಸಿಂ ಅಕ್ರಮ್ ಇತ್ತೀಚೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮಾಜಿ ನಾಯಕ ಇಮ್ರಾನ್ ಖಾನ್ ಅವರ ಕೊಡುಗೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನ್ನು ಟೀಕಿಸಿದ್ದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

52 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago