ಕ್ರೀಡೆ

ಸಿಡಬ್ಲ್ಯೂಸಿ-23 ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್‌ ಖಾನ್‌ ಕೈಬಿಟ್ಟ ಪಿಸಿಬಿ: ಆಕ್ರೋಶದ ಬಳಿಕ ಹೊಸ ವೀಡಿಯೋ

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ.

ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ ವಿಶ್ವಕಪ್ ನ್ನು ಗೆದ್ದ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದ ಇಮ್ರಾನ್ ಖಾನ್ ಅವರನ್ನು ಈ ಹಿಂದಿನ ವೀಡಿಯೋದಲ್ಲಿ ಕೈಬಿಡಲಾಗಿತ್ತು. ಆದರೆ ಈಗ ಹೊಸ ವೀಡಿಯೋದಲ್ಲಿ ಇಮ್ರಾನ್ ಖಾನ್ ನೇತೃತ್ವದ 1992 ರ ವಿಶ್ವಕಪ್ ತಂಡದ ವೀಡಿಯೋ ತುಣುಕುಗಳನ್ನು ಸೇರಿಸಲಾಗಿದೆ.

ಅಲ್ಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಅಭಿಯಾನದ ವೀಡಿಯೊವನ್ನು ಆಗಸ್ಟ್ 14 ರಂದು ಅಪ್‌ಲೋಡ್ ಮಾಡಲಾಗಿತ್ತು. ಆದರೆ ಅದರಲ್ಲಿ ಇಮ್ರಾನ್ ಖಾನ್ ಇಲ್ಲದೇ ಇದ್ದದ್ದು ಪಾಕ್ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಹೊಸ ವೀಡಿಯೊ ಇಮ್ರಾನ್ ತನ್ನ ಸಹ ಆಟಗಾರರೊಂದಿಗೆ ವಿಶ್ವಕಪ್ ಗೆಲುವನ್ನು ಆಚರಿಸುತ್ತಿರುವ ಮತ್ತು WC ಟ್ರೋಫಿಯನ್ನು ಹಿಡಿದಿರುವ ಫ್ರೇಮ್‌ಗಳನ್ನು ಒಳಗೊಂಡಿದೆ.

ಗಮನಾರ್ಹವಾಗಿ, ಪಾಕಿಸ್ತಾನದ ಲೆಜೆಂಡರಿ ವೇಗಿ ವಾಸಿಂ ಅಕ್ರಮ್ ಇತ್ತೀಚೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮಾಜಿ ನಾಯಕ ಇಮ್ರಾನ್ ಖಾನ್ ಅವರ ಕೊಡುಗೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನ್ನು ಟೀಕಿಸಿದ್ದರು.

andolanait

Recent Posts

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

30 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

49 mins ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

52 mins ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

2 hours ago