ಕ್ರೀಡೆ

ಸಿಡಬ್ಲ್ಯೂಸಿ-23 ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್‌ ಖಾನ್‌ ಕೈಬಿಟ್ಟ ಪಿಸಿಬಿ: ಆಕ್ರೋಶದ ಬಳಿಕ ಹೊಸ ವೀಡಿಯೋ

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ.

ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ ವಿಶ್ವಕಪ್ ನ್ನು ಗೆದ್ದ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದ ಇಮ್ರಾನ್ ಖಾನ್ ಅವರನ್ನು ಈ ಹಿಂದಿನ ವೀಡಿಯೋದಲ್ಲಿ ಕೈಬಿಡಲಾಗಿತ್ತು. ಆದರೆ ಈಗ ಹೊಸ ವೀಡಿಯೋದಲ್ಲಿ ಇಮ್ರಾನ್ ಖಾನ್ ನೇತೃತ್ವದ 1992 ರ ವಿಶ್ವಕಪ್ ತಂಡದ ವೀಡಿಯೋ ತುಣುಕುಗಳನ್ನು ಸೇರಿಸಲಾಗಿದೆ.

ಅಲ್ಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಅಭಿಯಾನದ ವೀಡಿಯೊವನ್ನು ಆಗಸ್ಟ್ 14 ರಂದು ಅಪ್‌ಲೋಡ್ ಮಾಡಲಾಗಿತ್ತು. ಆದರೆ ಅದರಲ್ಲಿ ಇಮ್ರಾನ್ ಖಾನ್ ಇಲ್ಲದೇ ಇದ್ದದ್ದು ಪಾಕ್ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಹೊಸ ವೀಡಿಯೊ ಇಮ್ರಾನ್ ತನ್ನ ಸಹ ಆಟಗಾರರೊಂದಿಗೆ ವಿಶ್ವಕಪ್ ಗೆಲುವನ್ನು ಆಚರಿಸುತ್ತಿರುವ ಮತ್ತು WC ಟ್ರೋಫಿಯನ್ನು ಹಿಡಿದಿರುವ ಫ್ರೇಮ್‌ಗಳನ್ನು ಒಳಗೊಂಡಿದೆ.

ಗಮನಾರ್ಹವಾಗಿ, ಪಾಕಿಸ್ತಾನದ ಲೆಜೆಂಡರಿ ವೇಗಿ ವಾಸಿಂ ಅಕ್ರಮ್ ಇತ್ತೀಚೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮಾಜಿ ನಾಯಕ ಇಮ್ರಾನ್ ಖಾನ್ ಅವರ ಕೊಡುಗೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನ್ನು ಟೀಕಿಸಿದ್ದರು.

andolanait

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

6 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

9 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

12 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

16 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

16 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

16 hours ago